ಹಂಪಿ ಉತ್ಸವದಲ್ಲಿ ಬೆಂಕಿಯ ಚಿತ್ರ 
ರಾಜ್ಯ

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವಾಗ ಬೆಂಕಿ; ತಪ್ಪಿದ ಅನಾಹುತ!

ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8-05ಕ್ಕೆ ಮುಖ್ಯ ವೇದಿಕೆಗೆ ಆಗಮಿಸಿದ್ದಾರೆ. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ.

ಹಂಪಿ: ವಿಜಯನಗರ ಜಿಲ್ಲೆ ಹೂಸಪೇಟೆ ತಾಲ್ಲೂಕಿನ ಪ್ರಸಿದ್ಧ ಹಂಪಿ ಉತ್ಸವ ಉದ್ಘಾಟನಾ ಸಮಾರಂಭದ ವೇದಿಕೆ ಬಳಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8-05ಕ್ಕೆ ಮುಖ್ಯ ವೇದಿಕೆಗೆ ಆಗಮಿಸಿದ್ದಾರೆ. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ.

ವೇದಿಕೆ ಬಳಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದರು. ಆದರೆ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ಬೈ ಸ್ಕೈ, ಎತ್ತುಗಳ ಪ್ರದರ್ಶನ, ರಂಗೋಲಿ ಸ್ಪರ್ಧೆ, ಫಲ ಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಬೋಟಿಂಗ್, ಹಂಪಿ ಇತಿಹಾಸ ಕುರಿತು ವಿಚಾರ ಸಂಕಿರಣ, ಆಹಾರ ಮೇಳ, ಡ್ರೋನ್ ಪ್ರದರ್ಶನ, ಗ್ರಾಮೀಣ ಕ್ರೀಡೆಗಳು, ಕವಿಗೋಷ್ಠಿ, ಗಾಳಿಪಟ ಪ್ರದರ್ಶನ, ಯುವ ಗೋಷ್ಠಿ, ಜಾನಪದ ವಾಹಿನಿ ಮತ್ತಿತರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ