ರಾಜ್ಯ

ಎಚ್ಚರ ಗ್ರಾಹಕರೇ: ಗ್ರಾಹಕರ 3.5 ಕೋಟಿ ರೂ ಮೌಲ್ಯದ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!

ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಫೆಬ್ರವರಿ 5ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ ನಂತರ ವಂಚನೆ ಬೆಳಕಿಗೆ ಬಂದಿದೆ.

ಉನ್ನತ ಅಧಿಕಾರಿಗಳಿಗೆ ತಿಳಿಸದೆ ಬ್ಯಾಂಕ್ ಲಾಕರ್‌ಗಳಿಂದ 2,780 ಗ್ರಾಂ ಗ್ರಾಹಕರ ಚಿನ್ನಾಭರಣಗಳನ್ನು ತೆಗೆದು ಆರೋಪಿಗಳು ಹಣಕಾಸು ಕಂಪನಿಯಲ್ಲಿ ಅಡಮಾನ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ.

ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ, ಬಿಜೆಪಿ ಕಿಡಿ!

T-20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ ಭರ್ಜರಿ ಗೆಲುವು!

ಬ್ರಹ್ಮಪುತ್ರ ನದಿ ಕೆಳಗೆ ದೇಶದ ಮೊದಲ ರಸ್ತೆ-ರೈಲು ಸುರಂಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್!

ಹಾಸನ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ, ಕೊಲೆ ಶಂಕೆ!

SCROLL FOR NEXT