ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಇಂದು ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆ, ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.

ಈ ಹೊಸ ರೈಲು ಮಾರ್ಗ ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಧಾಮ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ, ವಿಜಯ ವಿಠಲ ದೇವಾಲಯ, ಇತ್ಯಾದಿ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕವನ್ನು ಸುಧಾರಿಸುತ್ತದೆ. ಅಲ್ಲದೆ, ಕಬ್ಬಿಣದ ಅದಿರು ಸಮೃದ್ಧ ಬಳ್ಳಾರಿ ಪ್ರದೇಶಕ್ಕೆ ಸಂಪರ್ಕವನ್ನು ಉತ್ತಮಗೊಳಿಸುತ್ತದೆ.

ವಾರ್ಷಿಕ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆಯಿಂದ ಪ್ರತಿ ವರ್ಷ 323 ಕೋಟಿ ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಹ್ಮಪುತ್ರ ನದಿ ಕೆಳಗೆ ದೇಶದ ಮೊದಲ ರಸ್ತೆ-ರೈಲು ಸುರಂಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ 'ಹೊಟ್ಟೆ ಉರಿ': ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಅಕ್ರಮ ಚುನಾವಣೆ ಆರೋಪ: ಸುಪ್ರೀಂ ಕೋರ್ಟ್ ನಲ್ಲಿ ಯತ್ನಾಳ್‌ಗೆ ಜಯ, ಅಬ್ದುಲ್ ಹಮೀದ್‌ಗೆ ಮುಖಭಂಗ

T20 ವಿಶ್ವಕಪ್ 2026: ಭಾರತ - ಪಾಕ್ ಪಂದ್ಯ, ಹ್ಯಾಂಡ್ ಶೇಕ್ ಇರುತ್ತಾ- ಸೂರ್ಯ ಕುಮಾರ್ ಯಾದವ್ ಮಹತ್ವದ ಹೇಳಿಕೆ!

ಎಸ್‌ಸಿ ಮಹಿಳೆ ಮೇಲೆ ಅತ್ಯಾಚಾರ: ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರನ ಬಂಧನ

SCROLL FOR NEXT