ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ 
ರಾಜ್ಯ

ಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!

ಫೆಬ್ರವರಿ 7 ರಂದು ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಫೆಬ್ರವರಿ 16 ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ, ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.

ಕೊಪ್ಪಳ: ವಿಶ್ವವಿಖ್ಯಾತ ಹಂಪಿಯ ಬಳಿ ಕಳೆದ ವರ್ಷ ಇಸ್ರೇಲಿ ಪ್ರವಾಸಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಯುವಕನನ್ನು ಕೊಲೆ ಮಾಡಿದ್ದಕ್ಕಾಗಿ ಗಂಗಾವತಿ ಸಿವಿಲ್ ನ್ಯಾಯಾಲಯವು ಸೋಮವಾರ ಮೂವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ನ್ಯಾಯಾಲಯವು ತೀರ್ಪು ನೀಡಿ, ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ, ಶರಣಬಸವ ಮತ್ತು ಚೈತನ್ಯ ಸಾಯಿ ಅವರಿಗೆ ಮರಣದಂಡನೆ ವಿಧಿಸಿತು.

ಫೆಬ್ರವರಿ 7 ರಂದು ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಫೆಬ್ರವರಿ 16 ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ, ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.

ಪ್ರಾಸಿಕ್ಯೂಷನ್ ಪ್ರಕಾರ, ಮಾರ್ಚ್ 6, 2025 ರಂದು ಸಣಾಪುರ ಬಳಿ ಈ ಘೋರ ಅಪರಾಧ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯನ್ನು ಅಮಾನವೀಯ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿತ್ತು. ಈ ಘಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ, ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್ ನಾಗಲಕ್ಷ್ಮಿ ಸುದ್ದಿಗಾರರೊಂದಿಗೆ ಮಾತನಾಡಿ, ಹೋಂಸ್ಟೇ ಮಾಲೀಕರು ರಾತ್ರಿ 10.30 ರ ಸುಮಾರಿಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಭದ್ರಾ ಕಾಲುವೆಯ ಬಳಿಯ ಸಣಾಪುರದಲ್ಲಿ ಪ್ರವಾಸಿಗರಾದ ಮಹಾರಾಷ್ಟ್ರದ ಪಂಕಜ್, ಒಡಿಶಾದ ಬಿಭಾಸ್, ಅಮೆರಿಕದ ಡೇನಿಯಲ್ ಮತ್ತು ಇಸ್ರೇಲಿ ಮಹಿಳೆಯನ್ನು ನಕ್ಷತ್ರ ವೀಕ್ಷಣೆಗಾಗಿ ಕರೆದುಕೊಂಡು ಹೋಗಿದ್ದಾರೆ.

ಅಷ್ಟರಲ್ಲಿ ಮೂವರು ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಅಲ್ಲಿಗೆ ಬಂದು ಹಣಕಾಸಿನ ವಿಚಾರಕ್ಕೆ ಜಗಳವಾಡಿದರು ಎಂದು ಅವರು ಹೇಳಿದರು.

ನಂತರ, ಈ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ಉದ್ದೇಶದಿಂದ, ಅಪರಾಧಿಗಳು ಮೂವರು ಪುರುಷರನ್ನು ಕಾಲುವೆಗೆ ತಳ್ಳಿದರು. ಅವರು ಹೊರಗೆ ಬರದಂತೆ ಮಾಡಲು, ಅವರ ಮೇಲೆ ಕಲ್ಲು ಎಸೆದಿದ್ದಾರೆ.

ನಂತರ, ಅವರು ಹೋಂ-ಸ್ಟೇ ಮಾಲೀಕರು ಮತ್ತು ಇಸ್ರೇಲಿ ಪ್ರಜೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು.

"ಬಿಭಾಸ್ ಕುಮಾರ್ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದರು. ಪಂಕಜ್‌ಗೆ ಈಜಲು ಬರುತ್ತಿರಲಿಲ್ಲ, ಆದರೆ ಡೇನಿಯಲ್ ಅವರನ್ನು ಕಾಪಾಡಿದರು" ಎಂದು ನಾಗಲಕ್ಷ್ಮಿ ಹೇಳಿದರು.

ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ನಂತರ, ಆರೋಪಿಗಳು ಅವರ ಮೊಬೈಲ್ ಫೋನ್‌ಗಳು, ನಗದು ಮತ್ತು ಕ್ಯಾಮೆರಾದೊಂದಿಗೆ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು.

"ಇದು ಸಾಮೂಹಿಕ ಅತ್ಯಾಚಾರ, ಕೊಲೆ, ಕೊಲೆಯತ್ನ, ದರೋಡೆ ಮತ್ತು ಸುಲಿಗೆ ಪ್ರಕರಣವಾಗಿತ್ತು. ಆದ್ದರಿಂದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 ರ ಅಡಿಯಲ್ಲಿ ಅವರಿಗೆ ಮರಣದಂಡನೆ ವಿಧಿಸಿದರು. ಸಾಮೂಹಿಕ ಅತ್ಯಾಚಾರಕ್ಕೆ, ನ್ಯಾಯಾಲಯವು ಅವರಿಗೆ ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ವಿಧಿಸಿತು" ಎಂದು ನಾಗಲಕ್ಷ್ಮಿ ಹೇಳಿದರು.

ಆರೋಪಿಗಳು ಮೇಲ್ಮನವಿ ಸಲ್ಲಿಸಬಹುದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Pak ಎಂದಾಕ್ಷಣ ಪುಡಿಪುಡಿ ಮಾಡಬೇಕೆನಿಸುತ್ತದೆ, ಬಿಹಾರ ನನ್ನ ರಕ್ತದಲ್ಲಿದೆ; Ishan Kishan ಹಳೆಯ Video ವೈರಲ್!

"ನಿರ್ಧಾರವನ್ನು ಮರುಪರಿಶೀಲಿಸುತ್ತಿದ್ದೇನೆ": ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಭೂಪೇನ್ ಬೋರಾ ಯು ಟರ್ನ್

ನಾಳೆ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ

ಹಂಪಿ ಉತ್ಸವ: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ?

ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಗರಂ!

SCROLL FOR NEXT