ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ  
ರಾಜ್ಯ

ಭಾರತದ ಹಿತಾಸಕ್ತಿಯನ್ನು ಮಾರಾಟ ಮಾಡಬೇಡಿ; ರಾಹುಲ್ ಪ್ರಶ್ನೆಗೆ ಪ್ರಾಮಾಣಿಕ ಉತ್ತರ ನೀಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ

ಭಾರತದ ಕೃಷಿ ವ್ಯವಸ್ಥೆಯ ಮೇಲೆ ನಾವು ಇನ್ನೊಂದು ದೇಶಕ್ಕೆ ದೀರ್ಘಾವಧಿಯ ಹಿಡಿತವನ್ನು ನೀಡುತ್ತಿದ್ದೇವೆಯೇ ಎಂಬುದರ ಬಗ್ಗೆ ಸಂಬಂಧಿಸಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಎತ್ತಿರುವ ಕಳವಳಗಳಿಗೆ ಪ್ರಧಾನಿ ಮೋದಿ "ಸ್ಪಷ್ಟ ಮತ್ತು ಪ್ರಾಮಾಣಿಕ" ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಈ ಒಪ್ಪಂದವು ಅನಿಯಂತ್ರಿತ ಜಿಎಂ ಆಮದಿಗೆ ಅನುಮತಿ ನೀಡುತ್ತದೆ, ಸುರಕ್ಷತಾ ಕ್ರಮಗಳನ್ನು ದುರ್ಬಲಗೊಳಿಸುತ್ತದೆ. ರಕ್ಷಣೆಯಿಲ್ಲದೆ ಕ್ರಮೇಣ ಹೆಚ್ಚಿನ ಬೆಳೆಗಳನ್ನು ತೆರೆದರೆ, ಅದು ಕರ್ನಾಟಕ ಸೇರಿದಂತೆ ದೇಶಾದ್ಯಂತ ರೈತರಿಗೆ ನೇರವಾಗಿ ಹಾನಿ ಮಾಡುತ್ತದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿ ಅವರೇ, ಭಾರತದ ಹಿತಾಸಕ್ತಿಗಳನ್ನು ಮಾರಾಟ ಮಾಡಬೇಡಿ. ರಾಜಕೀಯ ಬಲವಂತಗಳಿಗಾಗಿ ನಮ್ಮ ರೈತರನ್ನು ಮಾರಾಟ ಮಾಡಬೇಡಿ. ವಿದೇಶಿ ಒತ್ತಡಕ್ಕೆ ಶರಣಾಗಬೇಡಿ. ನಮ್ಮ ರೈತರು ಚೌಕಾಸಿ ಮಾಡುವವರಲ್ಲ. ಅವರು ಈ ರಾಷ್ಟ್ರದ ಜೀವನಾಡಿ" ಎಂದು ಸಿದ್ದರಾಮಯ್ಯ ಹೇಳಿದರು.

"ಯುಎಸ್ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ ಬಗೆದಿರುವುದನ್ನು ನಾವು ನೋಡುತ್ತಿದ್ದೇವೆ." ಎಂದು ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

"ವ್ಯಾಪಾರೇತರ ಅಡೆತಡೆಗಳು" ಎಂದರೆ ಏನು ಎಂದು ತಿಳಿಯಲು ರಾಹುಲ್ ಪ್ರಯತ್ನಿಸಿದ್ದಾರೆ, GM ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿಸಿದರೆ ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ದೇಶಾದ್ಯಂತ ಸೋಯಾ ಬೆಳೆವ ರೈತರ ಪರಿಸ್ಥಿತಿ ಏನಾಗಬಹುದು ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತ ಪಡಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಈ ವ್ಯಾಪಾರ ಒಪ್ಪಂದ ಸಂಬಂಧ ರೈತರು ಸ್ಪಷ್ಟತೆ ಪಡೆಯಲು ಅರ್ಹರಾಗಿದ್ದಾರೆ. ಇದು ಇಂದಿನ ವಿಷಯವಲ್ಲ. ಭಾರತದ ಕೃಷಿ ವ್ಯವಸ್ಥೆಯ ಮೇಲೆ ನಾವು ಇನ್ನೊಂದು ದೇಶಕ್ಕೆ ದೀರ್ಘಾವಧಿಯ ಹಿಡಿತವನ್ನು ನೀಡುತ್ತಿದ್ದೇವೆಯೇ ಎಂಬುದರ ಬಗ್ಗೆ ಸಂಬಂಧಿಸಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!