ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ರೈತರ ಹಿತ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬ್ಯಾಂಕುಗಳು ರೈತರಿಗೆ ಭೂಮಿಯ ಮೌಲ್ಯದ ಶೇ.75ರಷ್ಟು ಕೃಷಿ ಸಾಲ ನೀಡಬೇಕು, ರೈತರ ಪುತ್ರರನ್ನು ವಿವಾಹವಾಗುವ ಹುಡುಗಿಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.20 ಮೀಸಲಾತಿ ನೀಡಬೇಕು ಎಂದು ಮನವಿ ಮಡಿದರು.

ಬೆಂಗಳೂರು: ಕೃಷಿ ರಾಜ್ಯ ಸರ್ಕಾರದ ಪ್ರಮುಖ ಆದ್ಯತಾ ಕ್ಷೇತ್ರವಾಗಿದ್ದು, ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಮಂಗಳವಾರ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆದ ಪೂರ್ವ ಬಜೆಟ್ ಸಭೆಯಲ್ಲಿ ಮಾತನಾಡಿದ ಅವರು, ರೈತರು ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ರೈತರ ಹಿತದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದೂ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಕೃಷಿ ಸಚಿವ ಎನ್. ಚಾಲುವರಾಯಸ್ವಾಮಿ, ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ವೇಳೆ ರೈತ ಸಂಘಟನೆಗಳ ಒಕ್ಕೂಟವು ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

ಬ್ಯಾಂಕುಗಳು ರೈತರಿಗೆ ಭೂಮಿಯ ಮೌಲ್ಯದ ಶೇ.75ರಷ್ಟು ಕೃಷಿ ಸಾಲ ನೀಡಬೇಕು, ರೈತರ ಪುತ್ರರನ್ನು ವಿವಾಹವಾಗುವ ಹುಡುಗಿಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.20 ಮೀಸಲಾತಿ ನೀಡಬೇಕು ಎಂದು ಮನವಿ ಮಡಿದರು.

ಇದಕ್ಕೂ ಮುನ್ನ, ಕಬ್ಬಿನ ಬೆಲೆಯನ್ನು ರೈತರ ಹೊಲದಲ್ಲೇ ನಿಗದಿಪಡಿಸುವ ವ್ಯವಸ್ಥೆ, ಕೆರೆಗಳ ಹೂಳು ತೆಗೆಯಿಸಿ ಅದನ್ನು ರೈತರ ಹೊಲಗಳಿಗೆ ಸಾಗಿಸುವುದು, ರೈತರಿಗೆ ರೂ.10,000 ಆರ್ಥಿಕ ಸಹಾಯ, ಕಳಪೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಮಾರಾಟದ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವುದು ಹಾಗೂ ಎಲ್ಲಾ ಬೆಳೆಗಳಿಗೆ ವಿಮಾ ರಕ್ಷಣೆಯನ್ನು ಒದಗಿಸುವಂತೆ ಒಕ್ಕೂಟ ಮನವಿ ಮಾಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾದ್ರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಂತ್ಯ: ಪ್ರಿಯಾಂಕಾ ಗಾಂಧಿ ಎಚ್ಚರಿಕೆ; Video

SCROLL FOR NEXT