ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ಸಚಿವರು 
ರಾಜ್ಯ

ಮೆಗಾ ರೈಲು ಕೋಚಿಂಗ್ ಟರ್ಮಿನಲ್ ಯೋಜನೆ ದೇವನಹಳ್ಳಿಯಿಂದ ಯಲಹಂಕಕ್ಕೆ ಶಿಫ್ಟ್

ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್‌ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.

ಬೆಂಗಳೂರು: ದೇವನಹಳ್ಳಿ ಬಳಿ ಸ್ಥಾಪಿಸಲಾಗುತ್ತಿದ್ದ ಪ್ರಸ್ತಾವಿತ ಮೆಗಾ ರೈಲು ಕೋಚಿಂಗ್ ಟರ್ಮಿನಲ್ ಅನ್ನು ಈಗ ಯಲಹಂಕದಲ್ಲಿ ನಿರ್ಮಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ಹೇಳಿದ್ದಾರೆ.

ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್‌ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.

ಮೈಸೂರು–ಕೆಎಸ್‌ಆರ್ ಬೆಂಗಳೂರು ಚಾಮುಂಡಿ ಎಕ್ಸ್‌ಪ್ರೆಸ್(16215/16216), ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್(17307/17308), ಟುಟಿಕೋರಿನ್–ಮೈಸೂರು ಎಕ್ಸ್‌ಪ್ರೆಸ್ (16235/16236) ಮತ್ತು ಮೈಸೂರು–ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್(16535/16536) ರೈಲುಗಳು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಮಾಡಲಿವೆ.

ದೀರ್ಘಕಾಲದಿಂದ ಬಾಕಿ ಉಳಿದಿದ್ದ ಈ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಹೇಳಿದ ಸೋಮಣ್ಣ, ನಾಯಂಡಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಕಚೇರಿ ಕೆಲಸಗಾರರಿಗೆ ಈ ನಿಲುಗಡೆಯಿಂದ ಪ್ರಯೋಜನವಾಗಲಿದೆ ಎಂದು ಹೇಳಿದರು.

ಈ ಬಜೆಟ್‌ನಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ 7,748 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ರಾಜ್ಯಾದ್ಯಂತ 52,950 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರು ಕಂಟೋನ್ಮೆಂಟ್ ಮತ್ತು ವೈಟ್‌ಫೀಲ್ಡ್ ನಡುವಿನ ಚತುಷ್ಪಥ ಯೋಜನೆ ವೇಗವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು.

ನಂತರ ವಿಜಯನಗರ ಮತ್ತು ಪಾದರಾಯನಪುರ ನಡುವಿನ ಪುನರ್ನಿರ್ಮಾಣಗೊಂಡ ರಸ್ತೆ ಓವರ್ ಬ್ರಿಡ್ಜ್(ಆರ್‌ಒಬಿ) ಸಂಖ್ಯೆ 431 ಅನ್ನು ಸಚಿವರು ಉದ್ಘಾಟಿಸಿದರು.

14.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಹೊಸ ಓವರ್ ಬ್ರಿಡ್ಜ್ ಜನನಿಬಿಡ ಮೈಸೂರು-ಬೆಂಗಳೂರು ರೈಲು ಮಾರ್ಗದಲ್ಲಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ದರೋಡೆ!

ಕಾಂಗ್ರೆಸ್ ಭವನಕ್ಕಾಗಿ ಸರ್ಕಾರಿ ಭೂಮಿ ಗುಳುಂ: ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಹೇಗೆ ಲಭ್ಯವಾಯಿತು? ಸರ್ಕಾರದ ವಿರುದ್ಧ BJP ಗಂಭೀರ ಆರೋಪ

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

SCROLL FOR NEXT