ಸುದ್ದಿ ಮುಖ್ಯಾಂಶಗಳು  online desk
ರಾಜ್ಯ

News wrap 18-02-2026| ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಫೆ.19 ರಂದು ಸಾರಿಗೆ ನೌಕರರ ಮುಷ್ಕರ; KSRTC, BMTC ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ; ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ DKS ಗರಂ

ವಿಧಾನಸೌಧದಲ್ಲಿ ಮಾಧ್ಯಮ ಕಾರ್ಯವ್ಯಾಪ್ತಿಗೆ ನಿರ್ಬಂಧ

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (News byte) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ಜಾರಿಗೊಳಿಸಲಾಗಿದೆ. ಸರ್ಕಾರದ ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ.

ಫೆ.19 ರಂದು ಸಾರಿಗೆ ಮುಷ್ಕರ; KSRTC, BMTC ಬಸ್ ಸೇವೆಗಳಲ್ಲಿ ವ್ಯತ್ಯಯ

38 ತಿಂಗಳ ವೇತನ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ಫೆ.19 ರ ಸಂಜೆ ಬಳಿಕ ಬಿಎಂಟಿಸಿ ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ನಾಳೆ 'ಬೆಂಗಳೂರು ಚಲೋ' ಕೈಗೊಳ್ಳಲಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ ಸಂಬಂಧ ನಿರ್ಣಯ ಕೈಗೊಳ್ಳದಿದ್ದರೆ ಸಾರಿಗೆ ಬಂದ್ ಆಗಲಿದೆ. ಮುಷ್ಕರದ ಸೂಚನೆ ಹಿನ್ನೆಲೆ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ಗರಂ

ಬೆಂಗಳೂರಲ್ಲಿ ಮತ್ತೊಮ್ಮೆ ಕಸ ಸಂಗ್ರಹಣೆ ಸಮಸ್ಯೆ ತಲೆ ಎತ್ತಿದೆ. ಮಿಟ್ಟಗಾನಹಳ್ಳಿ ಮತ್ತು ಬೆಳ್ಳಳ್ಳಿ ಪ್ರದೇಶಗಳ ಬಳಿ ನೂರಾರು ಕಸ ತುಂಬಿದ ಲಾರಿಗಳು ರಸ್ತೆಯಲ್ಲೇ ನಿಲ್ಲುತ್ತಿವೆ. ಸುಮಾರು 250ಕ್ಕೂ ಹೆಚ್ಚು ಲಾರಿಗಳು ಕಸ ತುಂಬಿ ನಿಂತಿವೆ ಎಂದು ವರದಿಗಳಿವೆ. ಇದರಿಂದ ನಗರದ ಅನೇಕ ಭಾಗಗಳಲ್ಲಿ ಕಸ ಸಂಗ್ರಹಣೆ ನಿಂತುಹೋಗಿದ್ದು, ರಸ್ತೆಗಳಲ್ಲಿ ಕಸ ಗುಂಡಿಗಳು ಹೆಚ್ಚಾಗುವ ಭಯ ಉಂಟಾಗಿದೆ. ಅಸಮರ್ಪಕ ಕಸ ವಿಲೇವಾರಿ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಗ್ರಾಮಸ್ಥರು ಗ್ರಾಮ ಅಭಿವೃದ್ಧಿ ನಿಧಿಗಳು 2 ವರ್ಷಗಳಿಂದ ಬಿಡುಗಡೆಯಾಗದೇ ಇರುವುದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಬಿಬಿಎಂಪಿ ಕಸ ಲಾರಿಗಳನ್ನು ಸೈಟ್‌ಗೆ ಬಿಡದಂತೆ ಅಡ್ಡಿಪಡಿಸಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿಗೆ ಅಡ್ಡಿ ಉಂಟು ಮಾಡಲಾಗುತ್ತಿರುವ ವಿಚಾರವಾಗಿ ಬಿಜೆಪಿ ಶಾಸಕರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ನಿಗದಿತ ಪ್ರದೇಶದಲ್ಲಿ ಕಸ ಸುರಿಯಲು ಅಡ್ಡಿ ಉಂಟು ಮಾಡಿದ್ದಲ್ಲಿ ಆ ಶಾಸಕರ ಮನೆ ಅಥವಾ ಬಿಜೆಪಿ ಕಚೇರಿ ಮುಂದೆ ಕಸ ಹಾಕಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಕಾಂಗ್ರೆಸ್ ಭವನಕ್ಕೆ ಅಕ್ರಮವಾಗಿ ಸರ್ಕಾರಿ ಜಾಗಗಳ ಮಂಜೂರು: ಬಿಜೆಪಿ ಗಂಭೀರ ಆರೋಪ

ರಾಜ್ಯದ ವಿವಿಧ ಭಾಗಗಳಲ್ಲಿ ಪಕ್ಷದ ಕಚೇರಿಗಳನ್ನು ಸ್ಥಾಪಿಸಲು ಕಾಂಗ್ರೆಸ್ 31 ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ಪಡೆದುಕೊಂಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರ ಪಡೆದುಕೊಂಡ ಜಾಗಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂತಿರುಗಿಸಬೇಕು ಎಂದು ಆಗ್ರಹಿಸಿದರು. ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಕಾಂಗ್ರೆಸ್ ಭವನಕ್ಕೆ ಹೇಗೆ ಲಭ್ಯ? ಕಾಂಗ್ರೆಸ್ ಸರ್ಕಾರ ಜನಹಿತವನ್ನು ಮರೆತು, ಕೇವಲ ಸ್ವಪಕ್ಷದ ಹಿತಾಸಕ್ತಿಗಷ್ಟೇ ಸೀಮಿತವಾಗಿರುವುದು ಅತ್ಯಂತ ದುರ್ದೈವದ ಸಂಗತಿ. ಪ್ರತಿ ವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ತಪ್ಪದೇ ಚರ್ಚೆಗೆ ಬರುವ ವಿಷಯವೇನೆಂದರೆ, ಅದು ಕೇವಲ “ಕಾಂಗ್ರೆಸ್ ಭವನಕ್ಕೆ ಜಾಗ ನೀಡುವುದು”. ರ್ಕಾರದ ಬೊಕ್ಕಸದಿಂದ ಅಥವಾ ಸಾರ್ವಜನಿಕ ಆಸ್ತಿಯಿಂದ ನಿರ್ಮಾಣವಾಗುವ ಈ ಭವನಗಳಿಂದ ಜನಸಾಮಾನ್ಯರಿಗೆ ಸಿಗುವ ಲಾಭವೇನು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

37 ಸಾವಿರ ಕೋಟಿ ರೂ ಬಾಕಿ ಹಣ ಬಿಡುಗಡೆಗೆ ಆಗ್ರಹ; ಬೃಹತ್ ಗುತ್ತಿಗೆದಾರರಿಗೆ ಮುಷ್ಕರದ ಎಚ್ಚರಿಕೆ

ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಹಣ ಸುಮಾರು 37 ಸಾವಿರ ಕೋಟಿ ರೂ.ಗಳ ವರೆಗೆ ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಮಾರ್ಚ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಾಕಿ ಪಾವತಿ ಆಗದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಯವರಿಗೆ, ಸಚಿವರನ್ನು ಹಾಗೂ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರನ್ನು ಹಲವಾರು ಸಾರಿ ಬೇಟಿ ಮಾಡಿ ಚರ್ಚಿಸಿದರೂ ಸಹ ಏನೂ ಪ್ರಯೋಜನವಾಗಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ, ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

T20 World Cup 2026: ಸತತ 3ನೇ ಪಂದ್ಯದಲ್ಲೂ ಡಕೌಟ್, ಕೋಚ್ ಗಂಭೀರ್ ದಾಖಲೆ ಸೇರಿ ಹಲವು ಹೀನಾಯ ದಾಖಲೆ ಬರೆದ Abhishek Sharma!

ಕಸ ವಿಲೇವಾರಿಗೆ ಅಡ್ಡಿ: ನಿಮ್ಮ ಮನೆ ಮುಂದೆಯೇ ಕಸ ಹಾಕಿಸ್ತೀನಿ- ಬಿಜೆಪಿ ನಾಯಕರಿಗೆ ಡಿಕೆಶಿ ವಾರ್ನಿಂಗ್! Video

ದೋಷಪೂರಿತ ಸರ್ಕಾರಿ ಪ್ರೆಗ್ನೆನ್ಸಿ ಕಿಟ್: ತಪ್ಪಾಗಿ 13 ವರ್ಷದ ಬಾಲಕಿ ಗರ್ಭಿಣಿ ಎಂದ ವೈದ್ಯರಿಗೆ ವಾರ್ನಿಂಗ್!

SCROLL FOR NEXT