ಎಚ್.ಡಿ ರಂಗನಾಥ್ 
ರಾಜ್ಯ

ರೈತರ ಮಕ್ಕಳನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿ: ಶಾಸಕ ಎಚ್.ಡಿ ರಂಗನಾಥ್

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ

ಕುಣಿಗಲ್: ರೈತ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡುವ ಯೋಜನೆಯನ್ನು ಘೋಷಿಸುವಂತೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ. ಮಹಿಳೆಯರು ರೈತರನ್ನು ಮದುವೆಯಾಗಿ ಹಳ್ಳಿಗಳಿಗೆ ಏಕೆ ಹೋಗಬೇಕು ಎಂದು ಕೇಳುತ್ತಿದ್ದಾರೆ. ಇದು ವಾಸ್ತವ. ಕೃಷಿ ಕುಟುಂಬಗಳ ಜೀವನವನ್ನು ಸುಧಾರಿಸಲು ನಮ್ಮ ಸರ್ಕಾರ ಏನಾದರೂ ಮಾಡಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ.

ಮಾರ್ಚ್ 6 ರಂದು 2026-27ರ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ ಅವರನ್ನು ಪ್ರೋತ್ಸಾಹಕ ಯೋಜನೆಯನ್ನು ರೂಪಿಸುವಂತೆ ಕೇಳಿಕೊಂಡಿದ್ದೇನೆ ಎಂದು ರಂಗನಾಥ್ ಹೇಳಿದರು. ಕೃಷಿ ಕುಟುಂಬದಲ್ಲಿ ಮದುವೆಯಾಗುವ ಯಾವುದೇ ಮಹಿಳೆಗೆ ಪ್ರೋತ್ಸಾಹಧನ ನೀಡಬೇಕು” ಎಂದು ರಂಗನಾಥ್ ಹೇಳಿದರು.

ಕೃಷಿ ಕುಟುಂಬದ ಸೊಸೆಗೆ ಪ್ರೋತ್ಸಾಹ ಧನ ನೀಡಬೇಕು. ನಾನು ಈಗಾಗಲೇ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದಿದ್ದೇನೆ" ಎಂದು ಅವರು ಹೇಳಿದರು. ರೈತರ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ ನಂತರ ರಂಗನಾಥ್ ಈ ವಿಷಯ ಪ್ರಸ್ತಾಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಚಿತ ಕೊಡುಗೆಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜಕೀಯದಲ್ಲಿ 'ಫ್ರೀಬೀಸ್‌' ಸಂಸ್ಕೃತಿ ಖಂಡಿಸಿದ ಸುಪ್ರೀಂ ಕೋರ್ಟ್

AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ-Video

ರಾಹುಲ್ ಗಾಂಧಿ, 25 ಸಂಸದರಿಗೆ ಕೊಲೆ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ 'ಗೋಡ್ಸೆ ಕಾರ್ಖಾನೆ' - ಕಾಂಗ್ರೆಸ್ ಕಿಡಿ

ಆಂಥ್ರೊಪಿಕ್ ವಿರುದ್ಧ ಆಂಥ್ರೊಪಿಕ್ ದೂರು: ಬೆಳಗಾವಿ ನ್ಯಾಯಾಲಯದಲ್ಲಿ ಕೇಸ್!

ಎಂಗೇಜ್‌ಮೆಂಟ್‌ ಮಾಡಿಕೊಂಡ ʻಗಿಚ್ಚಿ ಗಿಲಿ ಗಿಲಿʼ ಖ್ಯಾತಿಯ ಚಿಲ್ಲರ್ ಮಂಜು; ಹುಡುಗಿ ಯಾರು?

SCROLL FOR NEXT