ಸ್ನೇಹಮಯಿ ಕೃಷ್ಣ 
ರಾಜ್ಯ

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

ಬೆಂಗಳೂರು: ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

ಕರ್ನಾಟಕ ಆಡಳಿತ ಸೇವೆಯ (KAS) ಹಿರಿಯ ಅಧಿಕಾರಿ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (Muda) ಮಾಜಿ ಆಯುಕ್ತ ಡಿ ಬಿ ನಟೇಶ್ ದೂರು ಸಲ್ಲಿಸಿದ್ದರು. ಫೆಬ್ರವರಿ 18ರಂದು ಬೆಂಗಳೂರು ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ಸ್ನೇಹಮಯಿ ಕೃಷ್ಣ ಅವರು ನಟೇಶ್ ಅವರ ಫೋಟೋಗಳನ್ನು ಬಳಸಿಕೊಂಡು ನಕಲಿ ದಾಖಲೆಗಳು ಮತ್ತು ಆಡಿಯೋ ಕ್ಲಿಪ್ ಅನ್ನು ರಚಿಸಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿ, ಅಧಿಕಾರಿಯನ್ನು ಗುರಿಯಾಗಿಸಿಕೊಂಡು ಮಾನಹಾನಿಕರ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ತನಿಖೆಯ ಸಮಯದಲ್ಲಿ ದೂರುದಾರರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಯಿತು. ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಲಾದ ಆಡಿಯೊ ಕ್ಲಿಪ್ ಅನ್ನು ಪರಿಶೀಲಿಸಲಾಯಿತು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನ್ಯಾಯಾಲಯ ಹೊರಡಿಸಿದ ಸರ್ಚ್ ವಾರಂಟ್‌ನ ನಂತರ, ಪೊಲೀಸರು ಆರೋಪಿಯ ನಿವಾಸದಲ್ಲಿ ಶೋಧ ನಡೆಸಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತದ ವಿರುದ್ಧ ಸೋತಿದ್ದು ಅವಮಾನ ಅನಿಸಲಿಲ್ಲ: ಆದರೆ ಲಂಕಾ ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ Pak ಬೌಲರ್!

ತಾಯಿಯಿಂದ ಬೇರ್ಪಟ್ಟ ಕೋತಿ ಮರಿಗೆ ತೀವ್ರ ಕಿರುಕುಳ, ಕೊನೆಗೂ ಸಿಕ್ತು ಅಮ್ಮನ ಪ್ರೀತಿ! Video

ಅಮೆರಿಕ ನೇತೃತ್ವದ 'Pax Silica' ಕೂಟಕ್ಕೆ ಭಾರತ ಸೇರ್ಪಡೆ: ಚೀನಾದ ಆರ್ಥಿಕತೆಗೆ ಭಾರೀ ಹೊಡೆತ!

ಕಾಂಗ್ರೆಸ್ ದೇಶದ ಗಡಿ ತೆರೆದಿಟ್ಟಿದ್ದೆ ಅಸ್ಸಾಂನಲ್ಲಿ ಒಳನುಸುಳುವಿಕೆಗೆ ಕಾರಣ: ಅಮಿತ್ ಶಾ

'ದೊಡ್ಡ ಕಾರ್ಯಕ್ರಮ, ಸಣ್ಣಪುಟ್ಟ ಲೋಪಗಳು ಸಹಜ..': Congress ಟೀಕಿಸಿದ್ದ AI Summit ಶ್ಲಾಘಿಸಿದ ಸಂಸದ ಶಶಿತರೂರ್!

SCROLL FOR NEXT