ಬಾಗಲಕೋಟೆ ಕೋಮು ಸಂಘರ್ಷ 
ರಾಜ್ಯ

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

ಸಂಘರ್ಷದ ಬಳಿಕ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವಾರು ಜನರು ಬೀದಿಗಿಳಿದು ಮಾಂಸದ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಶುಕ್ರವಾರ ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆಯುತ್ತಿದ್ದ ಶಿವಾಜಿ ಮಹಾರಾಜರ ಮೆರವಣಿಗೆ ವೇಳೆ ಸಂಭವಿಸಿದ್ದ ಕೋಮುಸಂಘರ್ಷ ಮತ್ತು ಕಲ್ಲು ತೂರಾಟ ಉದ್ವಿಗ್ನತೆ ಶುಕ್ರವಾರವೂ ಮುಂದುವರೆದಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸಂಘರ್ಷದ ಬಳಿಕ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವಾರು ಜನರು ಬೀದಿಗಿಳಿದು ಮಾಂಸದ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಶುಕ್ರವಾರ ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಅವರು ಮಾಹಿತಿ ನೀಡಿದ್ದು, 'ಗುರುವಾರ ರಾತ್ರಿ 9:30 ರ ಸುಮಾರಿಗೆ ನವನಗರ ಪ್ರದೇಶದ ಕಿಲಾ ಓಣಿಯಲ್ಲಿರುವ ಮಸೀದಿಯ ಬಳಿ ಕಲ್ಲು ತೂರಾಟ ಘಟನೆ ಸಂಭವಿಸಿದಾಗ, ತಂಜೀರ್‌ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

ವಿಡಿಯೋ ದೃಶ್ಯಗಳಲ್ಲಿ, ಅವನು ಎರಡು ಕಲ್ಲುಗಳನ್ನು ತೂರುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಒಬ್ಬ ವ್ಯಕ್ತಿ ಮಾತ್ರ ಕಲ್ಲು ತೂರಾಟ ನಡೆಸಿದ್ದಾನೆ ಎಂದು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಅಂತೆಯೇ ಘರ್ಷಣೆ ವೇಳೆ ಯಾವುದೇ ಕೋಲು ಅಥವಾ ಆಯುಧಗಳನ್ನು ಬಳಸಲಾಗಿಲ್ಲ" ಎಂದು ಗೋಯಲ್ ಹೇಳಿದರು.

7 ಜನರ ಬಂಧನ

ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸಿದ ಆರೋಪದ ಮೇಲೆ ಇತರ ಏಳು ಜನರನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಸ್ವತಃ ಎಫ್‌ಐಆರ್ ದಾಖಲಿಸಿದ್ದಾರೆ.

ಇದರಲ್ಲಿ ಕಾನೂನುಬಾಹಿರ ಸಭೆ, ಗಲಭೆ, ಕೊಲೆ ಯತ್ನ, ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ ಮತ್ತು ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಸೇರಿದಂತೆ ಹಲವು ವಿಭಾಗಗಳಿವೆ. "ತಂಜೀರ್ ಸೇರಿದಂತೆ ಎಂಟು ಜನರನ್ನು ನಾವು ಬಂಧಿಸಿದ್ದೇವೆ" ಎಂದು ಎಸ್ಪಿ ಹೇಳಿದರು.

"ಈ ಘಟನೆಯ ನಂತರ, ಮೆರವಣಿಗೆ ಬಹಳ ಶಾಂತಿಯುತವಾಗಿ ಮುಂದುವರೆಯಿತು. ಎರಡೂ ಸಮುದಾಯಗಳ ನಾಯಕರು ನಮ್ಮೊಂದಿಗೆ ಸಹಕರಿಸಿದರು. ಸಂಘರ್ಷ ತಡೆಗಟ್ಟುವ ಕ್ರಮವಾಗಿ, ನಾವು ನಿಷೇಧಾಜ್ಞೆಗಳನ್ನು ಜಾರಿಗೊಳಿಸಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ವೀಡಿಯೊ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದೆ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

ಅಲ್ಲದೆ ಫೆಬ್ರವರಿ 19 ರ ಮಧ್ಯರಾತ್ರಿಯಿಂದ ಫೆಬ್ರವರಿ 24 ರ ಮಧ್ಯರಾತ್ರಿಯವರೆಗೆ ಬಾಗಲಕೋಟೆಯ ಕೆಲವು ಭಾಗಗಳಲ್ಲಿ ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಗಳು ನಿಷೇಧಿಸಿವೆ. ಅಪಾಯಕಾರಿ ಆಯುಧಗಳನ್ನು ಹೊಂದುವುದು, ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಚಟುವಟಿಕೆಗಳಲ್ಲಿ ತೊಡಗುವುದು ಮತ್ತು ಪೂರ್ವಾನುಮತಿಯಿಲ್ಲದೆ ಸಭೆಗಳು, ಸಮಾರಂಭಗಳು ಅಥವಾ ಧರಣಿಗಳನ್ನು ಆಯೋಜಿಸುವುದನ್ನು ಸಹ ನಿಷೇಧಿಸಲಾಗಿದೆ.

ಪೀಡಿತ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶುಕ್ರವಾರ ಬೆಳಿಗ್ಗೆ ಯುವಕರ ಗುಂಪು ಪ್ರತಿಭಟನೆ ನಡೆಸಿ, ಮೆರವಣಿಗೆ ನಡೆಸಿ, ಘೋಷಣೆಗಳನ್ನು ಕೂಗಿ, ಕಲ್ಲು ತೂರಾಟ ನಡೆಸಿ, ಹೆಚ್ಚುವರಿ ಭದ್ರತಾ ವ್ಯವಸ್ಥೆಗಳ ನಡುವೆಯೂ ಶಾಂತಿ ಕದಡಿದಾಗ ಉದ್ವಿಗ್ನತೆ ಉಂಟಾಯಿತು. ಜನಸಮೂಹವನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

'ಕಲ್ಲು ತೂರಿದವರೇ ಹೂ ಎಸೆಯಬೇಕು'

ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿ, 'ಕೇವಲ ನಮ್ಮನ್ನ ಮಾತ್ರ ಶಾಂತಿ ಸಭೆಗೆ ಕರೆದಿದ್ದಾರೆ. ಮುಸ್ಲಿಂ ಸುಮುದಾಯದ ಮುಖಂಡರು ಸಭೆಗೆ ಹಾಜಾರಾಗಿಲ್ಲ. ಶಾಂತಿ ಸಭೆ ಅಂದರೆ ಎರಡು ಕಡೆಯವರು ಇರಬೇಕು. ಅವರಿಗೆ ಶಾಂತಿ ಬೇಕಿಲ್ಲ. ಹಾಗಾಗಿ ಅವರು ಬಂದಿಲ್ಲ. ಡಿಸಿ,ಎಸ್ ಪಿ ಎಲ್ಲರೂ ಕರೆದ ಸಭೆಗೆ ಅವರು ಬರೋದಿಲ್ಲ ಅಂದರೆ ಎಷ್ಟಿರಬೇಕು? ಅದಕ್ಕೆ ಹೇಳೋದು ಇದು ಕಾಂಗ್ರೆಸ್ ಓಲೈಕೆಯ ಪರಿಣಾಮ ಅಂತ. ನಾವು ಯಾವುದಕ್ಕೂ ಸುಮ್ಮನೆ ಇರುವುದಿಲ್ಲ. ಎಲ್ಲಿ ಶಿವಾಜಿ ಮೂರ್ತಿಗೆ ಕಲ್ಲು ಹೊಡೆದಿದ್ದಾರೆ ಅದೇ ಜಾಗದಿಂದ ಪುಷ್ಪಗಳ ವೃಷ್ಟಿಗೈದು ಶಿವಾಜಿ ಮೆರವಣಿಗೆ ಮಾಡುತ್ತೇವೆ. ಯಾವಾಗ ಶಿವಾಜಿ‌ ಮೆರವಣಿಗೆ ಮಾಡುತ್ತೇವೆ ಎನ್ನುವುದನ್ನು ನಂತರ ತಿಳಿಸುತ್ತೇವೆ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಡ್ಡಾಯ; ವಾಟ್ಸಾಪ್ ಮೂಲಕ ಪೋಷಕರಿಗೆ ಎಚ್ಚರಿಕೆ!

ಫೆಬ್ರವರಿ 21 ರಿಂದ ಸಫಾರಿ ಪುನಾರಂಭ: ಷರತ್ತು ಕಟ್ಟುನಿಟ್ಟಿನ ಪಾಲನೆಗೆ Eshwar Khandre ಸೂಚನೆ

SCROLL FOR NEXT