ಸ್ನೇಹಮಯಿ ಕೃಷ್ಣ  
ರಾಜ್ಯ

ಮುಂಬಡ್ತಿಗೆ ಕೋಟ್ಯಾಂತರ ರೂ ಲಂಚ: MUDA ಮಾಜಿ ಆಯುಕ್ತ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ!

ಮುಂಬಡ್ತಿ ಪಡೆಯಲು ಕೋಟ್ಯಂತರ ರೂಪಾಯಿ ಲಂಚ ನೀಡಲಾಗಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಕ್ಕೆ (ED) ದೂರು ಸಲ್ಲಿಸಿದ್ದಾರೆ.

ಮೈಸೂರು: ಮುಡಾ (MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮುಂಬಡ್ತಿ ಪಡೆಯಲು ಕೋಟ್ಯಂತರ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಕ್ಕೆ (ED) ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, ಸುಮಾರು ರೂ. 9 ಕೋಟಿಗೂ ಹೆಚ್ಚು ಹಣವನ್ನು ಐದು ಚೀಲಗಳಲ್ಲಿ ಸಾಗಿಸಲಾಗಿತ್ತು ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ.

ಒಂದು ಚೀಲದಲ್ಲಿದ್ದ ರೂ. 1.60 ಕೋಟಿ ಹಣವನ್ನು ಹಿರಿಯ ಐಎಎಸ್ ಅಧಿಕಾರಿಗೆ ಸಂಬಂಧಿಸಿದ ವ್ಯಕ್ತಿಗೆ ಲಂಚವಾಗಿ ನೀಡಲಾಗಿದೆ. ಈ ಹಣ ಮಾಜಿ MUDA ಆಯುಕ್ತರದ್ದೇ ಎಂದು ದೂರಿದ್ದಾರೆ.

ಈ ಪ್ರಕರಣದಲ್ಲಿ ಬಳಸಲಾದ ಕಾರಿನ ಮಾಲೀಕ ಹಾಗೂ ಚಾಲಕರ ಬಗ್ಗೆ ತನಿಖೆ ನಡೆಸಬೇಕು, ಹಣದ ಮೂಲ ಮತ್ತು ಹಂಚಿಕೆಯ ಬಗ್ಗೆ ಪತ್ತೆಹಚ್ಚಬೇಕು, ಹಣವನ್ನು ನಗದು ಅಥವಾ ಆನ್‌ಲೈನ್ ಮೂಲಕ ಪಾವತಿಸಿರುವುದನ್ನು ಪರಿಶೀಲಿಸಬೇಕು, ಟವರ್ ಲೊಕೇಶನ್ ಮತ್ತು ಕರೆ ವಿವರ ದಾಖಲೆಗಳನ್ನು (WhatsApp ಕರೆಗಳು ಸೇರಿದಂತೆ) ಸಂಗ್ರಹಿಸಬೇಕು, ವಾಹನದ GPS ಡೇಟಾ ಹಾಗೂ ಸಂಬಂಧಿತ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ತನಿಖೆಯಲ್ಲಿ ತಪ್ಪಿತಸ್ಥರು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಈ ಆರೋಪಗಳು ಆಧಾರರಹಿತವಾಗಿದ್ದು ಯಾವುದೇ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿ, ಸ್ನೇಹಮಯಿ ಕೃಷ್ಣ ಅವರಿಗೆ ವಿವರವಾದ ಲಿಖಿತ ಸ್ಪಷ್ಟೀಕರಣವನ್ನು ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!

SCROLL FOR NEXT