ಸ್ನೇಹಮಯಿ ಕೃಷ್ಣ  
ರಾಜ್ಯ

ಮುಂಬಡ್ತಿಗೆ ಕೋಟ್ಯಾಂತರ ರೂ ಲಂಚ: MUDA ಮಾಜಿ ಆಯುಕ್ತ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ!

ಮುಂಬಡ್ತಿ ಪಡೆಯಲು ಕೋಟ್ಯಂತರ ರೂಪಾಯಿ ಲಂಚ ನೀಡಲಾಗಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಕ್ಕೆ (ED) ದೂರು ಸಲ್ಲಿಸಿದ್ದಾರೆ.

ಮೈಸೂರು: ಮುಡಾ (MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮುಂಬಡ್ತಿ ಪಡೆಯಲು ಕೋಟ್ಯಂತರ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯಕ್ಕೆ (ED) ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, ಸುಮಾರು ರೂ. 9 ಕೋಟಿಗೂ ಹೆಚ್ಚು ಹಣವನ್ನು ಐದು ಚೀಲಗಳಲ್ಲಿ ಸಾಗಿಸಲಾಗಿತ್ತು ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ.

ಒಂದು ಚೀಲದಲ್ಲಿದ್ದ ರೂ. 1.60 ಕೋಟಿ ಹಣವನ್ನು ಹಿರಿಯ ಐಎಎಸ್ ಅಧಿಕಾರಿಗೆ ಸಂಬಂಧಿಸಿದ ವ್ಯಕ್ತಿಗೆ ಲಂಚವಾಗಿ ನೀಡಲಾಗಿದೆ. ಈ ಹಣ ಮಾಜಿ MUDA ಆಯುಕ್ತರದ್ದೇ ಎಂದು ದೂರಿದ್ದಾರೆ.

ಈ ಪ್ರಕರಣದಲ್ಲಿ ಬಳಸಲಾದ ಕಾರಿನ ಮಾಲೀಕ ಹಾಗೂ ಚಾಲಕರ ಬಗ್ಗೆ ತನಿಖೆ ನಡೆಸಬೇಕು, ಹಣದ ಮೂಲ ಮತ್ತು ಹಂಚಿಕೆಯ ಬಗ್ಗೆ ಪತ್ತೆಹಚ್ಚಬೇಕು, ಹಣವನ್ನು ನಗದು ಅಥವಾ ಆನ್‌ಲೈನ್ ಮೂಲಕ ಪಾವತಿಸಿರುವುದನ್ನು ಪರಿಶೀಲಿಸಬೇಕು, ಟವರ್ ಲೊಕೇಶನ್ ಮತ್ತು ಕರೆ ವಿವರ ದಾಖಲೆಗಳನ್ನು (WhatsApp ಕರೆಗಳು ಸೇರಿದಂತೆ) ಸಂಗ್ರಹಿಸಬೇಕು, ವಾಹನದ GPS ಡೇಟಾ ಹಾಗೂ ಸಂಬಂಧಿತ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ತನಿಖೆಯಲ್ಲಿ ತಪ್ಪಿತಸ್ಥರು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಈ ಆರೋಪಗಳು ಆಧಾರರಹಿತವಾಗಿದ್ದು ಯಾವುದೇ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿ, ಸ್ನೇಹಮಯಿ ಕೃಷ್ಣ ಅವರಿಗೆ ವಿವರವಾದ ಲಿಖಿತ ಸ್ಪಷ್ಟೀಕರಣವನ್ನು ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್