ಬೈರತಿ ಬಸವರಾಜ್  
ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆ.26ವರೆಗೆ ನ್ಯಾಯಾಂಗ ಬಂಧನ

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು.

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು. ಕೋರ್ಟ್ ಅವರನ್ನ 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮಾಸ್ಕ್ ಧರಿಸಿ ಬಂದ ಶಾಸಕ

ಮುಖಕ್ಕೆ ಮಾಸ್ಕ್​ ಧರಿಸಿ ಜಡ್ಜ್ ಮುಂದೆ ಆರೋಪಿ ಬೈರತಿ ಬಸವರಾಜು ಹಾಜರಾದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಮತ್ತೆ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಮನವಿ ಮಾಡಿದರು. ಇನ್ನೂ ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಇನ್ನಷ್ಟು ತನಿಖೆ ಅಗತ್ಯ ಇದೆ ಎಂದು ವಕೀಲರು ವಾದ ಮಂಡಿಸಿದರು.

ಬಳಿಕ ಆರೋಪಿ ಪರ ವಕೀಲರು ಕೂಡ ಪ್ರತಿವಾದ ಮಾಡಿ, ಈಗಾಗಲೇ 9 ದಿನಗಳು ಕಸ್ಟಡಿಗೆ ನೀಡಲಾಗಿದೆ. ವೈದ್ಯಕೀಯ ವರದಿ ಆಧರಿಸಿ ಕಸ್ಟಡಿಗೆ ನೀಡಬಾರದು ಎಂದು ವಾದ ಮಂಡಿಸಿದರು.

ಅಂದಹಾಗೆ ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದು, ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು. ಸದ್ಯ ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.

ಫೆ.26 ರ ವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕಿದೆ. ಫೆಬ್ರವರಿ 26 ರಂದು ಮತ್ತೆ ಜಡ್ಜ್ ಮುಂದೆ ಹಾಜರು ಪಡಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಹೊಸ ಶೇ.10ರಷ್ಟು ಸುಂಕ ಘೋಷಿಸಿದ Donald Trump; ಭಾರತದ ಮೇಲೆ ಪರಿಣಾಮವೇನು?

T20 ವಿಶ್ವಕಪ್ 2026: 'ಸ್ಪಲ್ಪನಾದ್ರೂ ಬುದ್ದಿ ಇದ್ಯಾ..?': BCCI ಮತ್ತು ಟೀಂ ಇಂಡಿಯಾಗೆ ICC ನೆರವು ಆರೋಪಕ್ಕೆ ಖಡಕ್ ಉತ್ತರ

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ

ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ

SCROLL FOR NEXT