ಶಾಸಕ ಇಕ್ಬಲ್ ಹುಸೇನ್ 
ರಾಜ್ಯ

ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!

ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.

ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಡೇಟ್ ಕೊಟ್ಟಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಇಕ್ಬಲ್ ಹುಸೇನ್ ಇದೀಗ ಮೂರನೇ ಡೇಟ್ ಕೊಟ್ಟಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಫೆ.26 ರಂದು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದರು.

ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಾಯಕತ್ವ ಗೊಂದಲ ಪರಿಹರಿಸುವಂತೆ ಹೈಕಮಾಂಡ್ ಒತ್ತಾಯಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೊಟ್ಟ ಎರಡು ಡೇಟ್ಸ್ ಮಿಸ್ ಆಗಿರಬಹುದು, ಮೂರನೇ ದಿನಾಂಕ ಮಿಸ್ ಆಗಲ್ಲ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಇಕ್ಬಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ನಿಯಂತ್ರಿಸಲು ಬಂದರೆ ಕ್ಷಿಪಣಿ ದಾಳಿ: ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ..!

ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಏ.20ಕ್ಕೆ ಅಮೆರಿಕಾಕ್ಕೆ..!

ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಮಹತ್ವದ ಆದೇಶ

SCROLL FOR NEXT