ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಡೇಟ್ ಕೊಟ್ಟಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಇಕ್ಬಲ್ ಹುಸೇನ್ ಇದೀಗ ಮೂರನೇ ಡೇಟ್ ಕೊಟ್ಟಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಫೆ.26 ರಂದು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದರು.
ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಾಯಕತ್ವ ಗೊಂದಲ ಪರಿಹರಿಸುವಂತೆ ಹೈಕಮಾಂಡ್ ಒತ್ತಾಯಿಸಿದ್ದಾರೆ ಎಂದು ಹೇಳಿದರು.
ಈ ಹಿಂದೆ ಕೊಟ್ಟ ಎರಡು ಡೇಟ್ಸ್ ಮಿಸ್ ಆಗಿರಬಹುದು, ಮೂರನೇ ದಿನಾಂಕ ಮಿಸ್ ಆಗಲ್ಲ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಇಕ್ಬಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.