ಹೇಮಂತ್  
ರಾಜ್ಯ

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಕೋಣೆಯ ಬಾಗಿಲು ತೆಗೆದಾಗ ಹೇಮಂತ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಕುಟುಂಬಸ್ಥರೆಲ್ಲರೂ ತಿರುಪತಿಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.

ಶುಕ್ರವಾರ ಹೇಮಂತ್‌ನ ತಂಗಿಗೆ ಆಭರಣ ಕೊಡಿಸಲಾಗಿತ್ತು. ಈ ಸಂಬಂಧ ತಾಯಿ ಜೊತೆ ಹೇಮಂತ್ ಜಗಳ ಮಾಡಿಕೊಂಡಿದ್ದನು. ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ, ನನಗೇನೂ ಕೊಡಿಸಲ್ಲ ಎಂದು ಕೋಪದಲ್ಲಿ ಕೋಣೆಗೆ ಹೋಗಿದ್ದ ಹೇಮಂತ್ ಬಾಗಿಲು ಹಾಕಿಕೊಂಡಿದ್ದನು. ರಾತ್ರಿ ಊಟಕ್ಕೂ ಕರೆದ್ರೂ ಹೇಮಂತ್ ಕೋಣೆಯಿಂದ ಹೊರಗೆ ಬಂದಿರಲಿಲ್ಲ.

ರಾತ್ರಿ ಸುಮಾರು 8 ಗಂಟೆವರೆಗೂ ಸ್ನೇಹಿತರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ನಂತರ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದಾನೆ. ರಾತ್ರಿ ಸುಮಾರು 12 ಗಂಟೆಗೆ ಹೇಮಂತ್ ನೇಣುಬಿಗಿದುಕೊಂಡಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

Viral Video: ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶ

ISI, ತೆಹ್ರೀಕ್-ಇ- ತಾಲಿಬಾನ್ ಹಿಂದೂಸ್ತಾನ್ ಜೊತೆಗೆ ನಂಟು: ಡೆಹ್ರಾಡೂನ್ ವ್ಯಕ್ತಿಯ ಬಂಧನ!

ದಾವಣಗೆರೆ: 'ಸಮರ್ಥ್ ಸೋಲಿಸಲು ಕಾಂಗ್ರೆಸ್ ನಿಂದಲೇ ಸಂಚು'; ಮುಸ್ಲಿಂ ನಾಯಕರಿಂದ ಸ್ಫೋಟಕ ಹೇಳಿಕೆ

SCROLL FOR NEXT