ಗ್ರೇಟರ್ ಬೆಂಗಳೂರು ಪ್ರಾಧಿಕಾರ  
ರಾಜ್ಯ

ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ, ಮರು ಪರಿಶೀಲನೆಗೆ GBA ಮುಂದು..!

ಈ ಪ್ರಮಾಣದ ಸಿಬ್ಬಂದಿಗೆ ತಿಂಗಳಿಗೆ ಸುಮಾರು ರೂ.50 ಕೋಟಿ ವೆಚ್ಚವಾಗಲಿದ್ದು, ಇದು ರಾಜ್ಯದ ಖಜಾನೆಗೆ ದೊಡ್ಡ ಹೊರೆಯಾಗಲಿದೆ ಎಂದು ಸರ್ಕಾರ ಸೂಚಿಸಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪ್ರಸ್ತಾಪಿಸಿರುವ ಹೊಸ ನೇಮಕಾತಿ (C&R) ನಿಯಮಾವಳಿಯಲ್ಲಿ 6,500 ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯವಿದೆ ಎಂಬ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತಾಪವನೆಯನ್ನು ಮರುಪರಿಶೀಲನೆ ನಡೆಸಲು ಪಾಲಿಕೆ ಮುಂದಾಗಿದೆ.

ಈ ಪ್ರಮಾಣದ ಸಿಬ್ಬಂದಿಗೆ ತಿಂಗಳಿಗೆ ಸುಮಾರು ರೂ.50 ಕೋಟಿ ವೆಚ್ಚವಾಗಲಿದ್ದು, ಇದು ರಾಜ್ಯದ ಖಜಾನೆಗೆ ದೊಡ್ಡ ಹೊರೆಯಾಗಲಿದೆ ಎಂದು ಸರ್ಕಾರ ಸೂಚಿಸಿದೆ.

ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಯನ್ನು ಹೊರತುಪಡಿಸಿ, ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ವರ್ಗಗಳ (ಗ್ರೂಪ್ ಎ, ಬಿ, ಸಿ, ಡಿ) ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಸುಮಾರು 6,500 ಜನ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಕೆಲ ಇಲಾಖೆಗಳು ಅಗತ್ಯಕ್ಕಿಂತ ಹೆಚ್ಚು ಸಿಬ್ಬಂದಿ ಬೇಡಿಕೆ ಇಟ್ಟಿರುವುದು ಕಂಡುಬಂದಿದ್ದು, ಈಗಿರುವ ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿದರೆ ಪ್ರಸ್ತಾವಿತ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಹಿರಿಯ ಜಿಬಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಬ್ಬಂದಿ ಹಾಗೂ ಅಧಿಕಾರಿಗಳ ನೇಮಕಾತಿ ಪ್ರಸ್ತಾವನೆಯು ಸಚಿವರು, ಕಾನೂನು ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೇರಿದಂತೆ ಹಲವು ಹಂತಗಳನ್ನು ದಾಟಿದ ಬಳಿಕ ಅಂತಿಮವಾಗಿ ಹಣಕಾಸು ಇಲಾಖೆಯ ಅನುಮೋದನೆ ಪಡೆಯಬೇಕಿದೆ.

ಮುಂದಿನ ವಾರ ಪರಿಷ್ಕೃತ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಬಿಎ ವಿಶೇಷ ಆಯುಕ್ತ (ಹಣಕಾಸು ಮತ್ತು ಆಡಳಿತ) ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಜಿಬಿಎಗೆ 11 ಹೊಸ ಸದಸ್ಯರ ಸೇರ್ಪಡೆ

ಈ ನಡುವೆ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಮರುಸಂರಚಿಸಿ 11 ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿದೆ.

ಇದರೊಂದಿಗೆ ಕಳೆದ ವರ್ಷ ಆಗಸ್ಟ್ 26ರಂದು 75 ಸದಸ್ಯರಾಗಿ ರಚಿಸಲಾಗಿದ್ದ ಜಿಬಿಎ ಈಗ 86 ಸದಸ್ಯರನ್ನು ಹೊಂದಿದೆ.

ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್, ಸಂಸದೆ ಸುಧಾ ಮೂರ್ತಿ, ಅನೆಕಲ್ ಶಾಸಕ ಬಿ. ಶಿವಣ್ಣ, ವಿಧಾನಪರಿಷತ್ ಸದಸ್ಯರಾದ ರಾಮೋಜಿ ಗೌಡ, ಡಾ. ಎಂ.ಆರ್. ಸೀತಾರಾಮ್, ಉಮಾಶ್ರೀ, ಎಚ್.ಪಿ. ಸುಧಾಮ್ ದಾಸ್, ರಮೇಶ್ ಬಾಬು,. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿವಿಧ ದೇಶಗಳ ಮೇಲೆ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕ ಸುಪ್ರೀಂ ಕೋರ್ಟ್

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ, ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

ಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ

"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್

SCROLL FOR NEXT