ಕಾರ್ಯಕ್ರಮದಲ್ಲಿ ಎಚ್.ಡಿ ಕುಮಾರಸ್ವಾಮಿ  
ರಾಜ್ಯ

ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ: ಮಂಡ್ಯ ಜನಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಬಗೆಯಲ್ಲ; HDK

ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಂಡ್ಯ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್‌ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ದೃಢವಾಗಿ ದುಡಿಮೆ ಮಾಡುತ್ತಿದ್ದೇನೆ. ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿ ಅನೇಕ ರೀತಿಯ ತಾಂತ್ರಿಕ ಚರ್ಚೆಗಳು ಹಾಗೂ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಕೆಲಸ ನಡೆಯುತ್ತಿದೆ.

ಮುಂದಿನ ದಿನಗಳಲ್ಲಿ ಎಚ್ಎಂಟಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಯೋಜನೆಯಿದೆ ಎಂದರು. ಅಲ್ಲದೆ, ನಾನು ಪ್ರತಿನಿಧಿಸುವ ಮಂಡ್ಯ ಜಿಲ್ಲೆಯಲ್ಲಿ 2 ಕಾರ್ಖಾನೆಗಳನ್ನು ಸ್ಥಾಪಿಸಿ, ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದರು.

ಮಂಡ್ಯ ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದ್ದು, ಒಂದು ಸಾವಿರ ಕೋಟಿ ವೆಚ್ಚದಲ್ಲಿ ಕನಿಷ್ಠ ಎರಡು ಕೈಗಾರಿಕೆಗಳನ್ನು ತರಲು ತೀರ್ಮಾನಿಸಿದ್ದೇನೆ. ಶ್ರೀ ಕಾಲಭೈರವನ ಈ ಸನ್ನಿಧಿಯಲ್ಲಿ ನಿಂತು ಧೈರ್ಯದಿಂದ ಹೇಳುತ್ತಿದ್ದೇನೆ. ಹೇಳಿದ ಕೆಲಸವನ್ನು ತಪ್ಪದೇ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲಿದೆ. ಯಾವುದೇ ಕಾರಣಕ್ಕೂ ದ್ರೋಹ ಬಗೆಯದೆ ಕೆಲಸ ಮಾಡುತ್ತೇನೆ. ನನ್ನ ಕೆಲಸಗಳ ಬಗ್ಗೆ ಜಾಹೀರಾತು ಹಾಕಿಸಿ ಪ್ರಯೋಜನ ಪಡೆಯಲು ಬಯಸುವುದಿಲ್ಲ. ನನ್ನ ಕೆಲಸ‌ವನ್ನು ದೇವರು ನೋಡುತ್ತಾನೆ. ಭದ್ರಾವತಿ ಉಕ್ಕು ಕಾರ್ಖಾನೆ, ಎಚ್ಎಂಟಿ ಕಾರ್ಖಾನೆ ಶೀಘ್ರದಲ್ಲಿ ಪುನಶ್ಚೇತನಗೊಳಿಸಲಾಗುವುದು ಎಂದು ವಿಶ್ವಾಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ

ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ, ಮರು ಪರಿಶೀಲನೆಗೆ GBA ಮುಂದು..!

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ, ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

ಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ

SCROLL FOR NEXT