ಮಸೀದಿ  online desk
ರಾಜ್ಯ

ಉಗ್ರ ಜುನೈದ್ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ: ಹಣದ ಆಸೆ ಬೇಡ, ದೇಶ ಸೇವೆಗಾಗಿ ಮಾಹಿತಿ ನೀಡಿ; ಮುಸ್ಲಿಂ ಸಮುದಾಯಕ್ಕೆ Imam ಮನವಿ

ಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ,

ಬೆಂಗಳೂರು: ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರ ಜುನೈದ್ ಅಹ್ಮದ್ ಪತ್ತೆಗೆ ಎನ್ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿರುವ ಬೆನ್ನಲ್ಲೇ, ಬೆಂಗಳೂರಿನ ಸಿಟಿ ಮಾರ್ಕೆಟ್ ಜಾಮಿಯಾ ಮಸೀದಿಯ ಮುಖ್ಯ ಇಮಾಮ್ ಮಕ್ಸೂದ್ ಇಮ್ರಾನ್ ರಶಾದಿ ಅವರು ಸಮುದಾಯಕ್ಕೆ ಮಹತ್ವದ ಸಂದೇಶ ನೀಡಿದ್ದಾರೆ.

ಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ.

ಇಸ್ಲಾಂ ಧರ್ಮವು ಎಂದಿಗೂ ಭಯೋತ್ಪಾದಕ ಕೃತ್ಯಗಳನ್ನು ಅಥವಾ ಅಮಾಯಕರ ಕೊಲೆಯನ್ನು ಬೆಂಬಲಿಸುವುದಿಲ್ಲ.ಬಹುಮಾನಕ್ಕಾಗಿ ನೋಡದೆ, ಸಮಾಜಕ್ಕೆ ಹಾನಿ ಮಾಡುವವರನ್ನು ಹಿಡಿಯಲು ಸಹಕರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಹೇಳಿದ್ದಾರೆ.

ಇದೇ ವೇಳೆ ಈ ಸಂದೇಶವನ್ನು ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಪ್ರಕಟಿಸಲಾಗುವುದೆಂದು ತಿಳಿಸಿರುವ ಅವರು, ಜುನೈದ್ ಅಹ್ಮದ್ ಸೇರಿದಂತೆ ಸಮಾಜಕ್ಕೆ ಅಪಾಯಕಾರಿಯಾದವರ ಕುರಿತು ಮಾಹಿತಿ ಸಿಕ್ಕಲ್ಲಿ ಅಧಿಕಾರಿಗಳಿಗೆ ತಿಳಿಸಲು ಸಮುದಾಯದವರಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 800 ಮಸೀದಿಗಳು ಮತ್ತು ಕರ್ನಾಟಕದಲ್ಲಿ 2,000ಕ್ಕೂ ಹೆಚ್ಚು ಮಸೀದಿಗಳಿದ್ದು, ಎನ್‌ಐಎ ವಿತರಿಸಿದ ಪೋಸ್ಟರ್‌ಗಳ ಆಧಾರದಲ್ಲಿ ಶಂಕಿತರ ಕುರಿತು ಮಾಹಿತಿ ನೀಡುವಂತೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!