ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳು  
ರಾಜ್ಯ

ಜೈಲಿನಲ್ಲಿ ರಾಜಾತಿಥ್ಯ: ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು ಮದ್ಯ, ಗಾಂಜಾ ಸೇವನೆ ವಿಡಿಯೊ ವೈರಲ್

ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು ತೇಲಾಡುತ್ತಿರುವ ವಿಡಿಯೋ ಹೊರಬಿದ್ದಿದೆ.

ಬೆಂಗಳೂರು: ರಾಜ್ಯದ ಹಲವು ಕಾರಾಗೃಹಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುವ ವಿಚಾರ ಆಗಾಗ ಸುದ್ದಿಯಾಗುತ್ತಿರುತ್ತದೆ. ಜೈಲುಗಳಲ್ಲಿ ಕೈದಿಗಳು ಅಕ್ರಮವಾಗಿ ಗಾಂಜಾ, ಅಫೀಮು, ಮದ್ಯ ಸೇವನೆಯಲ್ಲಿ ತೊಡಗಿರುತ್ತಾರೆ, ಅವರಿಗೆ ಅಕ್ರಮವಾಗಿ ಪೂರೈಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿ ಮಾಡುತ್ತಿದೆ.

ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು ತೇಲಾಡುತ್ತಿರುವ ವಿಡಿಯೋ ಹೊರಬಿದ್ದಿದೆ.

ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಸುಲಭವಾಗಿ ರಾಜಾತಿಥ್ಯ ಸಿಗುತ್ತಿವೆ. ಜೈಲಿನಲ್ಲೇ ಕೈದಿಗಳು ಮೋಜು-ಮಸ್ತಿಯಲ್ಲಿದ್ದಾರೆ. ಗುಂಡು, ತುಂಡು, ಗಾಂಜಾ, ಟಿವಿ, ಮೊಬೈಲ್‌ಗಳನ್ನು ಬಳಿಸಿಕೊಂಡು ಮಜಾ ಮಾಡುತ್ತಿರುವ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಟೈಮ್‌ಪಾಸ್ ಮಾಡಲು ಕೇರಂ ಬೋರ್ಡ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಮೂರು ದಿನದ ಹಿಂದೆಯಷ್ಟೆ ಹುಬ್ಬಳ್ಳಿ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದರು. ಹುಬ್ಬಳ್ಳಿ ಉಪ ಕಾರಾಗೃಹ ಹಾಗೂ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಭೇಟಿ ನೀಡಿದ ಮೂರು ದಿನಗಳಲ್ಲೇ ಜೈಲಿನೊಳಗೆ ಎಗ್ಗಿಲ್ಲದೇ ಗಾಂಜಾ ಪೂರೈಸಲಾಗುತ್ತಿದೆ ಎಂಬ ಆರೋಪ ಬಂದಿದೆ.

ಹುಬ್ಬಳ್ಳಿ ಸಬ್ ಜೈಲ್ ವಿಡಿಯೋ ವೈರಲ್ ಆಗಿದೆ. ವಿಡಿಯೋ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಸತ್ಯ ಒಪ್ಪಿಕೊಂಡಿದ್ದಾರೆ. ವಿಡಿಯೋಗಳು ಸಬ್ ಜೈಲಿನದ್ದು, ವಾಟ್ಸಾಪ್ ಮೆಸೇಜ್ ಮೂಲಕ ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿತ ಘಟನೆ ನಡೆದಿರುವುದು ಸತ್ಯ. ಆದರೆ, ಅದು ನಾನು ಹುದ್ದೆ ಸ್ವೀಕರಿಸುವ ಮೊದಲು ನಡೆದದ್ದು ಹುದ್ದೆ ಸ್ವೀಕರಿಸಿದ ನಂತರ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದೇನೆ. ಸಂಬಂಧಪಟ್ಟ ಸಿಬ್ಬಂದಿಯ ನಿರ್ಲಕ್ಷ್ಯ ಸಾಬೀತಾದರೆ, ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್