ಕಾಡಾನೆ ಸೆರೆ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ಗಳಲ್ಲಿ ವ್ಯಾಪಕ ಆತಂಕ ಮೂಡಿಸಿದ್ದ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕೊನೆಗೂ ಅರಣ್ಯ ಇಲಾಖೆ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ.

ಬಾಳೆಹೊನ್ನೂರು, ಎನ್.ಆರ್.ಪುರ ತಾಲ್ಲೂಕಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಾಗರಹೊಳೆಯ ಸಿಬ್ಬಂದಿ, ಜೂನಿಯರ್ ಅರ್ಜುನ ಸೇರಿದಂತೆ ಏಳು ಪಳಗಿದ ಆನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.

ಅರಣ್ಯ ಅಧಿಕಾರಿಗಳು ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಏಳು ತರಬೇತಿ ಪಡೆದ ಆನೆಗಳು (ಕುಮ್ಕಿಗಳು) ಮತ್ತು ಸುಮಾರು 75 ಸಿಬ್ಬಂದಿಗಳನ್ನು ಒಳಗೊಂಡ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಮತ್ತೊಂದು ಬಲಿ

ನಾಗೇಶ್ ಗೌಡ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ತೋಟದಲ್ಲಿ ಕಳೆದ ಏಳು ದಿನಗಳ ಹಿಂದೆ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಎಂಬವರು ಕೂಡ ಕಾಡಾನೆ ದಾಳಿಗೆ ಬಲಿಯಾಗಿದ್ದರು.

ಏಳು ದಿನಗಳ ಅಂತರದಲ್ಲಿ ಎರಡನೇ ಬಲಿ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳಬಾರದು ಎಂದು ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದರೂ, ಜೀವನೋಪಾಯದ ಅನಿವಾರ್ಯತೆಯಿಂದ ಕಾರ್ಮಿಕರು ತೋಟಗಳಿಗೆ ತೆರಳುತ್ತಿರುವುದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಕೊನೆಗೂ ಪುಂಡಾನೆ ಸೆರೆ

ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆಗೆ ದಾಳಿ ನಡೆಸಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಅಚೇತನಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಗಿದೆ.

ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ

ಈ ಮಧ್ಯೆ ಮಹಿಳೆಯ ಮೃತದೇಹವನ್ನು ಸಾಗಿಸುತ್ತಿದ್ದ ವಾಹನವನ್ನು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಸ್ಥಳೀಯರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ ನೂರಾರು ಗ್ರಾಮಸ್ಥರು ಪೀಡಿತ ಕುಟುಂಬಕ್ಕೆ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video