ರಾಜ್ಯಪಾಲರೊಂದಿಗೆ ಸಿಎಂ 
ರಾಜ್ಯ

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ; ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ

ವಿದೇಶಗಳ ಪ್ರಮುಖ ವಿಶ್ವವಿದ್ಯಾಲಯಗಳು ಶಾಶ್ವತ ಸಿಬ್ಬಂದಿ ಇಲ್ಲದೆ ಅತಿಥಿ ಹಾಗೂ ವಿಸಿಟಿಂಗ್ ಪ್ರೊಫೆಸರ್‌ಗಳ ಮೂಲಕ ಶೈಕ್ಷಣಿಕ ವಾತಾವರಣವನ್ನು ಉತ್ತಮಗೊಳಿಸುತ್ತಿವೆ.

ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ, ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿಕೊಳ್ಳುವಂತೆ ರಾಜ್ಯ ಸರ್ಕಾರಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ (ವಿಸಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಲಹೆ ನೀಡಿದ್ದಾರೆ.

ವಿಸಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಿಬ್ಬಂದಿ ಕೊರತೆ ಕುರಿತ ಪುನರಾವರ್ತಿತ ಮನವಿಗಳಿಗೆ ಪ್ರತಿಕ್ರಿಯಿಸಿದರು.

ವಿದೇಶಗಳ ಪ್ರಮುಖ ವಿಶ್ವವಿದ್ಯಾಲಯಗಳು ಶಾಶ್ವತ ಸಿಬ್ಬಂದಿ ಇಲ್ಲದೆ ಅತಿಥಿ ಹಾಗೂ ವಿಸಿಟಿಂಗ್ ಪ್ರೊಫೆಸರ್‌ಗಳ ಮೂಲಕ ಶೈಕ್ಷಣಿಕ ವಾತಾವರಣವನ್ನು ಉತ್ತಮಗೊಳಿಸುತ್ತಿವೆ. ನಾವು ಅತಿಥಿ ಉಪನ್ಯಾಸಕರನ್ನು ನೀಡಿದ್ದೇವೆ. ಅವರನ್ನು ನಿಮ್ಮ ಕಾರ್ಯಬಲದ ಭಾಗವಾಗಿ ಏಕೆ ಪರಿಗಣಿಸುವುದಿಲ್ಲ? ಎಂದು ಪ್ರಶ್ನಿಸಿದರು.

ಕಳೆದ ಎರಡು ದಶಕಗಳಲ್ಲಿ ಅಕ್ರಮ ನೇಮಕಾತಿಗಳಿಂದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗಂಭೀರ ಶಿಕ್ಷಕರ ಕೊರತೆ ಉಂಟಾಗಿದೆ. “ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ 60–70 ಶೇಕಡಾ ಬೋಧನಾ ಹುದ್ದೆಗಳು ಖಾಲಿ ಇವೆ. ಸರ್ಕಾರ ನೇಮಕಾತಿಯನ್ನು ತಡೆಹಿಡಿದಿಲ್ಲ. ಕಳೆದ ಬಜೆಟ್‌ನಲ್ಲಿ ಪದವಿ ಮತ್ತು ತಾಂತ್ರಿಕ ಕಾಲೇಜುಗಳಲ್ಲಿ 2,000 ಹುದ್ದೆಗಳನ್ನು ಭರ್ತಿ ಮಾಡಲು ಅನುದಾನ ಒದಗಿಸಿದ್ದೇವೆ. ಈ ವರ್ಷ ವಿಶ್ವವಿದ್ಯಾಲಯಗಳಲ್ಲೂ ನೇಮಕಾತಿಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಎಐ ಉದಯಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಕೋರ್ಸ್‌ಗಳಲ್ಲಿ ಮಾತ್ರ ಸಿಬ್ಬಂದಿ ನೇಮಕಾತಿ ಮಾಡಬೇಕು. ಬೇಡಿಕೆಯಿಲ್ಲದ ಕೋರ್ಸ್‌ಗಳಿಗೆ ನೇಮಕಾತಿ ಬೇಡ ಎಂದು ತಿಳಿಸಿದರು.

ಇದೇ ವೇಳೆ ವಿವಿಗಳಲ್ಲಿನ ಜಾತಿ ವ್ಯವಸ್ಥೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಅಧ್ಯಾಪಕರು ತಮ್ಮ ರಾಜಕೀಯ ಅಥವಾ ವೈಚಾರಿಕ ಅಭಿಪ್ರಾಯಗಳನ್ನು ವಿದ್ಯಾರ್ಥಿಗಳ ಮೇಲೆ ಹೇರಬಾರದು. ವೈಜ್ಞಾನಿಕ ಹಾಗೂ ತಾರ್ಕಿಕ ಚಿಂತನೆ ಬೆಳೆಸಬೇಕು ಎಂದು ಹೇಳಿದರು.

ಬಳಿಕ 2030ರೊಳಗೆ ಮೈಸೂರನ್ನು ‘ಜಾಗತಿಕ ಶಿಕ್ಷಣ ಮತ್ತು ನವೋದ್ಯಮ ಕೇಂದ್ರ’ ಹಾಗೂ ‘ರಾಷ್ಟ್ರೀಯ ಜ್ಞಾನ ಜಿಲ್ಲೆ’ಯಾಗಿ ರೂಪಿಸಲಾಗುವುದು ಎಂದು ಸಿಎಂ ಹೇಳಿದರು.

100 ಎಕರೆ ಪ್ರದೇಶದಲ್ಲಿ ಎಡ್‌ಟೆಕ್ ಮತ್ತು ಲೈಫ್ ಸೈನ್ಸ್ ಸಂಶೋಧನಾ ಉದ್ಯಾನ ನಿರ್ಮಿಸಿ 15,000 ಕೋಟಿ ರೂ. ಹೂಡಿಕೆ ಆಕರ್ಷಿಸಿ 50,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸುವ ಗುರಿಯಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ವಿಶ್ವವಿದ್ಯಾಲಯಗಳು ಸ್ವಂತ ಆದಾಯ ಸೃಷ್ಟಿಸಬೇಕು ಮತ್ತು ಸರ್ಕಾರದ ಮೇಲೆ ಅವಲಂಬಿತವಾಗಿರಬಾರದು ಎಂದು ಸಲಹೆ ನೀಡಿದರು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳನ್ನು ಬಳಸಿಕೊಳ್ಳುವಂತೆ ವಿಸಿಗಳಿಗೆ ಸೂಚಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿ, ಆರ್ಥಿಕ ಶಿಸ್ತು, ಪಾರದರ್ಶಕತೆ ಮತ್ತು ಜವಾಬ್ದಾರಿತ್ವವನ್ನು ಅಭಿವೃದ್ಧಿಪಡಿಸುವಂತೆ ವಿಶ್ವವಿದ್ಯಾಲಯಗಳಿಗೆ ಸೂಚಿಸಿದರು.

ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಅಕ್ರಮಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯಗಳ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಅವರು ಮಾತನಾಡಿ, ವಿಸಿ ಮತ್ತು ರಿಜಿಸ್ಟ್ರಾರ್ ನಡುವಿನ ಸಹಕಾರ ಆಡಳಿತಕ್ಕೆ ಅಗತ್ಯವೆಂದು ಹೇಳಿದರು. ಇದೇ ವೇಳೆ ಶಿಕ್ಷಕ ಮತ್ತು ಸಿಬ್ಬಂದಿ ಕೊರತೆ ಕುರಿತು ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸಿಎಂಗೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT