ಚಾಲಕನೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ಪುಂಡರು. 
ರಾಜ್ಯ

ಬೆಂಗಳೂರು: ಕಾರಿಗೆ ಟಚ್​​ ಆಗಿದ್ದಕ್ಕೆ ರೋಗಿಯನ್ನು ಕರೆತರಲು ಹೊರಟಿದ್ದ ಆಂಬ್ಯುಲೆನ್ಸ್‌ ಅಡ್ಡಗಟ್ಟಿದ ಪುಂಡರು, ನಡುರಸ್ತೆಯಲ್ಲೇ ರಂಪಾಟ..! Video

ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ.

ಬೆಂಗಳೂರು: ಕಾರು ಟಚ್ ಆಗಿದ್ದಕ್ಕೆ ಪುಂಡರ ಗುಂಪೊಂದು ರೋಗಿಯನ್ನು ಕರೆತರಲು ಎಮರ್ಜೆನ್ಸಿ ಸೈರನ್ ಹಾಕಿ ಹೊರಟಿದ್ದ ಆಂಬ್ಯುಲೆನ್ಸ್'ನ್ನು ಅಡ್ಡಗಟ್ಟಿ, ನಡುರಸ್ತೆಯಲ್ಲಿ ರಂಪಾಟ ನಡೆಸಿರುವ ಘಟನೆಯೊಂದು ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ.

ಪುಂಡರ ಗುಂಪು ಸುಮಾರು ಹದಿನೈದು ನಿಮಿಷಗಳ ಕಾಲ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು, ಆ್ಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಿದ್ದಾರೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರೋಗಿಗಳನ್ನು ಸಾಗಿಸುವ ತುರ್ತು ವಾಹನಕ್ಕೆ ಅಡ್ಡಿಪಡಿಸಿ, ಅದರ ಸಿಬ್ಬಂದಿಗೆ ನಿಂದಿಸಿದ ಕಾರು ಚಾಲಕನ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆಕ್ಸಿಕೋ ಡ್ರಗ್ ಕಾರ್ಟೆಲ್ ಕಿಂಗ್‌ಪಿನ್ 'ಎಲ್ ಮೆಂಚೊ' ಹತ್ಯೆ: ಹಲವು ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ

ಕಾಂಗ್ರೆಸ್ ಪಕ್ಷದ ರಕ್ಷಣೆ ಏಕೆ ? ಮಹಿಳಾ ಸಂಸದರನ್ನು ಗುರಾಣಿಯಾಗಿ ಬಳಸಿಕೊಳ್ಳುವಷ್ಟು ಟೊಳ್ಳಾಗಿದ್ದೀರಾ? ಅಶಿಸ್ತಿನ ನಾಯಕರಿಂದ ದೇಶ ನಾಶ- PM

'ದೇವರೇ... ದಯವಿಟ್ಟು ಮುಂದಿನ ಜಾತ್ರೆಯೊಳಗೆ ನಮ್ ಅತ್ತೆ ಸಾಯುವಂತೆ ಮಾಡು': ದೇಗುಲ ಹುಂಡಿಯೊಳಗೆ ಚೀಟಿ ಪತ್ತೆ!

ಬಿಟ್ಟುಹೋದ ಪತ್ನಿ, ಪುತ್ರನಿಗೆ ದುಬಾರಿ ಬೆಲೆಯ 'ಕಾರು ಗಿಫ್ಟ್' ಮಾಡಿದ ಹಾರ್ದಿಕ್ ಪಾಂಡ್ಯ! Video

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಎರಡು ಪ್ರಮಾದಗಳು: ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಆರ್. ಅಶ್ವಿನ್ ಕಿಡಿ! Video

SCROLL FOR NEXT