ಸಂಗ್ರಹ ಚಿತ್ರ 
ರಾಜ್ಯ

ಜೀವವನ್ನೇ ಕಸಿದ Ludo ಆಟ: ಲೂಡೊ ಕಾಯಿನ್ ನುಂಗಿ 8 ವರ್ಷದ ಬಾಲಕಿ ಉಸಿರುಗಟ್ಟಿ ದಾರುಣ ಸಾವು..!

ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ.

ಮಂಗಳೂರು: ಆಟದ ವೇಳೆ ಲೂಡೋ ಆಟದ ನಾಣ್ಯವನ್ನು ನುಂಗಿದ ಪರಿಣಾಮ 8 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಂಗಳೂರು ಸಮೀಪದ ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತನುಷ್ಕಾ ಎಂದು ಗುರುತಿಸಲಾಗಿದೆ. ಈಕೆ ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ. ತನುಷ್ಕಾ ತೊಕ್ಕೊಟ್ಟಿನ ಸೆಂಟ್ ಸೆಬಾಸ್ಟಿಯನ್ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ. ಈ ವೇಳೆ ಉಸಿರುಗಟ್ಟಿದ್ದು, ಕೂಡಲೇ ಬಾಲಕಿಯನ್ನು ತಾಯಿ ಮತ್ತು ನೆರೆಯವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ, ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿಯನ್ನು ಮೃತಪಟ್ಟಿದ್ದಾಳೆ.

ತನುಷ್ಕಾ ಅವರ ತಾಯಿ ಉಲ್ಲಾಳದ ಒಂದು ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸದ ಸ್ಥಳದ ಸಮೀಪ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಲೂಡೋ ಕಾಯಿನ್ ಪತ್ತೆಯಾಗಿದ್ದು, ಅದರಿಂದಲೇ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆಂದು ತಿಳಿದುಬಂದಿದೆ.

ಈ ಸಂಬಂಧ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆಕ್ಸಿಕೋ ಡ್ರಗ್ ಕಾರ್ಟೆಲ್ ಕಿಂಗ್‌ಪಿನ್ 'ಎಲ್ ಮೆಂಚೊ' ಹತ್ಯೆ: ಹಲವು ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ

CM ಕುರ್ಚಿ ಕದನ: ಬಾಯಿ ಮುಚ್ಚಿಕೊಂಡರಿ; ಬೆಂಬಲಿಗರಿಗೆ ಡಿಕೆ.ಶಿವಕುಮಾರ್ ಖಡಕ್ ಎಚ್ಚರಿಕೆ

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು, ಪೊಗದಸ್ತಾಗಿ ಬೆಳೆದು ಬೇಲಿ ಹಾರಿದ್ರಿ: ಅನ್‌ ಪಾಲಿಷ್ಡ್‌ ಡೈಮಂಡ್‌ ಕೃಷ್ಣರಿಗೆ ಚೂರಿ ಹಾಕಿದ್ರಿ; ಒಕ್ಕಲಿಗರ ಮೇಲೆ ನಿಮ್ಮ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ!

ಲಂಚ ಪ್ರಕರಣ: BJP ಶಾಸಕ ಡಾ. ಚಂದ್ರು ಲಮಾಣಿ, ಇಬ್ಬರು ಆಪ್ತರಿಗೆ ನ್ಯಾಯಾಂಗ ಬಂಧನ!

ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ತಿರುವು: HDK ಭೇಟಿಯಾದ ಡಾ.ಜಿ. ಪರಮೇಶ್ವರ್; ಹೆಚ್ಚಿದ ಕುತೂಹಲ

SCROLL FOR NEXT