ಧಾರವಾಡದಲ್ಲಿ ಪ್ರತಿಭಟನೆ ನಿಯಂತ್ರಿಸಲು ಪೊಲೀಸರ ಹರಸಾಹಸ  
ರಾಜ್ಯ

2.7 ಲಕ್ಷ ಖಾಲಿ ಹುದ್ದೆಗಳನ್ನುಶೀಘ್ರವೇ ಭರ್ತಿ ಮಾಡಿ: ಧಾರವಾಡದಲ್ಲಿ ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Video

ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ಸಂಕಷ್ಟಗಳನ್ನು ಹಂಚಿಕೊಂಡರು. ಒಬ್ಬರು ಪರೀಕ್ಷೆಗಳಿಗಾಗಿ ಕುಟುಂಬವನ್ನೇ ಬಿಟ್ಟು ಓದಿದ್ದೇನೆ, ಆದರೆ ಪರೀಕ್ಷೆಗಳೇ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಧಾರವಾಡ: ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಸಾವಿರಾರು ಮಂದಿ ಧಾರವಾಡದಲ್ಲಿ ಮೆರವಣಿಗೆ ನಡೆಸಿ, ಶಿಕ್ಷಣ, ಪೊಲೀಸ್ ಮತ್ತು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ 2.7 ಲಕ್ಷ ಖಾಲಿ ಹುದ್ದೆಗಳನ್ನು ರಾಜ್ಯ ಸರ್ಕಾರ ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ಸಂಕಷ್ಟಗಳನ್ನು ಹಂಚಿಕೊಂಡರು. ಒಬ್ಬರು ಪರೀಕ್ಷೆಗಳಿಗಾಗಿ ಕುಟುಂಬವನ್ನೇ ಬಿಟ್ಟು ಓದಿದ್ದೇನೆ, ಆದರೆ ಪರೀಕ್ಷೆಗಳೇ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಪ್ರತಿಭಟನೆಯ ಆಯೋಜಕರಾದ ಕಂಠಕುಮಾರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಏನು ಮಾಡಿತು ಎಂಬುದನ್ನು ಪ್ರಶ್ನಿಸಿದರು. ಖಾಸಗಿ ವಲಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿರುವುದನ್ನು ಉಲ್ಲೇಖಿಸಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ.

ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್​​ ಮೊರೆ ಹೋಗಿದ್ದು, ಕೋರ್ಟ್​​ ಪೊಲೀಸರೊಂದಿಗೇ ಈ ಬಗ್ಗೆ ಚರ್ಚಿಸಿ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್​​ 3ಕ್ಕೆ ಮುಂದೂಡಿತ್ತು. ಈ ನಡುವೆ ಇಂದು ಬಿಜೆಪಿ ಹೋರಾಟಕ್ಕೆ ಪೊಲೀಸರು ಗ್ರೀನ್ ಸಿಗ್ನಲ್ ನೀಡಿರು ಹಿನ್ನೆಲೆ ಅನುಮತಿ ಇಲ್ಲದಿದ್ದರೂ ಯುವಕರು ಬೀದಿಗೆ ಇಳಿದಿದ್ದಾರೆ. ಜಯನಗರ ವೃತ್ತದ ಕಡೆಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಶ್ರೀನಗರ ವೃತ್ತದ ಬಳಿಯೇ ಪೊಲೀಸರು ತಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

ಎಲ್ಲರಿಗೂ ಕಾನೂನು ಒಂದೇ: ಅನುಮತಿ ಇಲ್ಲದೆ ತಮ್ಮ ಪೋಸ್ಟರ್‌ ಅಂಟಿಸಿದ್ದಕ್ಕೆ ಮೂರು FIR ದಾಖಲು!

'ಬಾಹುಬಲಿ'ಗೆ ಏನಾಯಿತು?: ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕ!

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ