ರಾಜ್ಯ

'ಏಯ್ ನಾನು ಪೊಲೀಸ್ ಅಧಿಕಾರಿ, ನನ್ನ ಮುಟ್ಟಕ್ಕಾಗಲ್ಲ': ಪ್ರಯಾಣಿಕ- KSRTC ಅಧಿಕಾರಿಗಳ ನಡುವೆ ಜಟಾಪಟಿ, Video ವೈರಲ್

ಚಾಮರಾಜನಗರಕ್ಕೆ ಪ್ರತ್ಯೇಕ ಬಸ್ ಇದ್ದರೂ, ಈ ವ್ಯಕ್ತಿ ಕೊಯಂಬತ್ತೂರು ಬಸ್ಸಿನಲ್ಲಿ ರಿಸರ್ವ್ ಸೀಟ್'ನಲ್ಲಿ ಕುಳಿತಿದ್ದೂ ಅಲ್ಲದೆ, ಸಿಬ್ಬಂದಿ ಹಾಗೂ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಮೈಸೂರು: ಮೈಸೂರು ಸೆಂಟ್ರಲ್ ಬಸ್ ನಿಲ್ದಾಣದಲ್ಲಿ ಕೊಯಂಬತ್ತೂರಿಗೆ ತೆರಳುವ ಅಂತರ್‌ರಾಜ್ಯ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಓರ್ವ ವ್ಯಕ್ತಿ ಮತ್ತು ಸಾರಿಗೆ ಅಧಿಕಾರಿಗಳ ನಡುವೆ ದೊಡ್ಡ ಜಟಾಪಟಿಯೇ ನಡೆದಿದೆ.

ಸಾರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ, ಈ ವ್ಯಕ್ತಿ ತನ್ನನ್ನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಹೈಡ್ರಾಮಾ ನಡೆಸಿದ್ದಾನೆ. ಚಾಮರಾಜನಗರಕ್ಕೆ ಪ್ರತ್ಯೇಕ ಬಸ್ ಇದ್ದರೂ, ಈ ವ್ಯಕ್ತಿ ಕೊಯಂಬತ್ತೂರು ಬಸ್ಸಿನಲ್ಲಿ ರಿಸರ್ವ್ ಸೀಟ್'ನಲ್ಲಿ ಕುಳಿತಿದ್ದೂ ಅಲ್ಲದೆ, ಸಿಬ್ಬಂದಿ ಹಾಗೂ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆತ ಬಸ್ ಸಿಬ್ಬಂದಿಗೆ ಅವಮಾನಕಾರಿ ಪದಗಳನ್ನು ಬಳಸಿದ್ದು, “ನಾನು ಪೊಲೀಸ್ ಅಧಿಕಾರಿ, ನೀವು KSRTC ಸಿಬ್ಬಂದಿ ನನಗೆ ಏನೂ ಮಾಡುವುದಕ್ಕೆ ಆಗಲ್ಲ” ಎಂದು ದರ್ಪ ತೋರಿದ್ದಾನೆಂದು ಹೇಳಿದ್ದಾರೆ. ಅಲ್ಲದೆ, ಪ್ರಯಾಣಿಕರೊಂದಿಗೆ ಕೂಡ ಜಗಳವಾಡಿ, ಅಶ್ಲೀಲ ಭಾಷೆ ಬಳಸಿದ ಎಂದು ಹೇಳಲಾಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಆತ ಸರ್ಕಾರಿ ನೌಕರ ಅಥವಾ ಪೊಲೀಸ್ ಅಧಿಕಾರಿಯಾಗಿದ್ದರೆ ಶಿಸ್ತು ಮತ್ತು ನಡವಳಿಕೆ ಅತ್ಯಂತ ಮುಖ್ಯ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಈ ವ್ಯಕ್ತಿಯ ಗುರುತು ಮತ್ತು ಪೊಲೀಸ್ ಅಧಿಕಾರಿಯಾಗಿರುವುದರ ಕುರಿತು ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು KSRTC ಸಿಬ್ಬಂದಿ ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ

ಆರೋಪಿ ಪ್ರಯಾಣಿಕನ ಸ್ಪಷ್ಟನೆ

ಇನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಆರೋಪಗಳಿಗೆ ಆರೋಪಿ ಪ್ರಯಾಣಿಕ ಸಿದ್ದೇಗೌಡ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, 'ಮೈಸೂರಿನ TC ಷರೀಫ್ ರವರು ದಿನಾಂಕ 23-02-2026 ರಂದು ಬೆಳಿಗ್ಗೆ 7.30ಕ್ಕೆ ಮೈಸೂರು - ಕೊಯಮತ್ತೂರು ಬಸ್ ಸಂಖ್ಯೆ KA 09 f 5496 ಬಸ್ ನಲ್ಲಿ Unreserved ಸೀಟ್ ನಲ್ಲಿ ಕೂತಿದ್ದ ನನ್ನನು ಎದ್ದು ನಿಂತು ಪ್ರಯಾಣಿಸು ಎಂದು ಹೇಳುವ ಅಧಿಕಾರ e ಅಧಿಕಾರಿಗೆ ಕೊಟ್ಟವರು ಯಾರು.?

ಒಬ್ಬ ಪ್ರಯಾಣಿಕನ ಮೇಲೆ e ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕೇಳಲು ಬಂದ ಸಹ ಪ್ರಯಾಣಿಕನಿಗೆ ಕೆಟ್ಟದಾಗಿ ಬೈದು, ತಳ್ಳಿ ಹಲ್ಲೆ ಮಾಡಿರುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೆ ತಾವು ರೆಕಾರ್ಡ್ ಮಾಡಿದ ವಿಡಿಯೋವನ್ನೂ ಕೂಡ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT