ಮೃತ ಬಾಲಕ ಸಂಕೇತ್  
ರಾಜ್ಯ

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಹತ್ಯೆ: ಸಹಪಾಠಿಗಳ ಜಗಳ ಬಿಡಿಸಲು ಹೋಗಿ ಹೆಣವಾದ ಬಾಲಕ

ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಜಗಳ ಬಿಡಿಸಲು ಹೋದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಮೇಲೆ ಅನ್ಯ ಕೋಮಿನ ಬಾಲಕರು ಮಾರಣಾಂತಿಕ ಹಲ್ಲೆ ನಡೆಸಿ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಕೆಲ ವಿದ್ಯಾರ್ಥಿಗಳ ನಡುವೆ ಜಗಳ ನಡೆಯುತ್ತಿತ್ತು. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಾಗ ಅದನ್ನು ಬಿಡಿಸಲೆಂದು ಸಂಕೇತ್ ಮಧ್ಯಪ್ರವೇಶಿಸಿದ್ದಾನೆ. ಆದರೆ, ಇದೇ ವೇಳೆ ನಾಲ್ವರು ವಿದ್ಯಾರ್ಥಿಗಳು ಅವನ ಮೇಲೆ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ.

ಹಲ್ಲೆಯ ವೇಳೆ ಎದೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದ ಪರಿಣಾಮ ಸಂಕೇತ್ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆ ಸಂಬಂಧಿಸಿ ತುಂಗನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಮೃತ ಸಂಕೇತ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel