ನಾಸೀರ್ ಹುಸೇನ್ 
ರಾಜ್ಯ

ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ; ಸಂಸದ ನಾಸೀರ್ ಹುಸೇನ್

ಖಬರಸ್ಥಾನ ಆಸ್ತಿಗೆ ನಕಲು ದಾಖಲೆ ಸೃಷ್ಟಿಸಿ ಮಾರಾಟ ಮಾಡಲು ಕಂದಾಯ ಅಧಿಕಾರಿಯೇ ಕಾರಣರಾಗಿದ್ದಾರೆ. ಅವರ ಲಾಗಿನ್ ಮೂಲಕವೇ ಭೂ ಕಬಳಿಕೆಯ ಕೃತ್ಯ ನಡೆದಿದೆ ಎಂದು ಗೊತ್ತಾಗಿಯೂ ಎಫ್‌ಐಆರ್‌ನಲ್ಲಿ ಅವರ ಹೆಸರು ಸೇರಿಸಿಲ್ಲ

ಬಳ್ಳಾರಿ: ನಿನ್ನ ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಕೊಡೋದಿಲ್ಲ ತಾನೇ. ನಿನ್ನ ಲಾಗಿನ್ ಮೂಲಕ ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ? ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್ ಕಂದಾಯ ಅಧಿಕಾರಿ ನಂದೀಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಖಬರಸ್ಥಾನ ಆಸ್ತಿಗೆ ನಕಲು ದಾಖಲೆ ಸೃಷ್ಟಿಸಿ ಮಾರಾಟ ಮಾಡಲು ಕಂದಾಯ ಅಧಿಕಾರಿಯೇ ಕಾರಣರಾಗಿದ್ದಾರೆ. ಅವರ ಲಾಗಿನ್ ಮೂಲಕವೇ ಭೂ ಕಬಳಿಕೆಯ ಕೃತ್ಯ ನಡೆದಿದೆ ಎಂದು ಗೊತ್ತಾಗಿಯೂ ಎಫ್‌ಐಆರ್‌ನಲ್ಲಿ ಅವರ ಹೆಸರು ಸೇರಿಸಿಲ್ಲ

ಅವರ ವಿರುದ್ಧ ಮುಂದಿನ ಕ್ರಮ ಜರುಗಿಸುವ ಯಾವ ನಿಲುವು ಸಹ ತೆಗೆದುಕೊಂಡಿಲ್ಲ ಏಕೆ ಎಂದು ಸದಸ್ಯರು ಸಭೆಯಲ್ಲಿ ಗದ್ದಲ ಎಬ್ಬಿಸಿದರು. ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಪಾಲಿಕೆ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಿಮಗೆ ಮಾಹಿತಿ ಇಲ್ಲದೇ ಸರ್ಕಾರದ ಆಸ್ತಿ ಹೇಗೆ ಕಬಳಿಕೆ ಆಗಲು ಸಾಧ್ಯ? ಎಂದು ಪ್ರಶ್ನಿಸಿದರು.

ಘಟನೆ ನಡೆದು 15 ದಿನಗಳಾದರೂ ಪ್ರಕರಣ ದಾಖಲಾಗಿಲ್ಲ. ನಾನೇ ಪೊಲೀಸರ ಜೊತೆ ಮಾತಾಡಿ ಪ್ರಕರಣ ದಾಖಲಿಸಿದೆ. ಇಷ್ಟಾಗಿಯೂ ತಪ್ಪಿತಸ್ಥರನ್ನು ಅಮಾನತು ಮಾಡಿಲ್ಲ. ನಿಮ್ಮ ನಡೆ ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ.

ನೀವು ಅಪರ ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಯಾಗಿ ಪಾಲಿಕೆ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದಾದರೆ ಹೇಗೆ? ಎಂದು ಪ್ರಶ್ನಿಸಿದರು. ವಕ್ಫ್ ಆಸ್ತಿಯನ್ನೇ ಕಬಳಿಸಿದರೂ ಸುಮ್ಮನಿದ್ದೀರಿ ಎಂದಾದರೆ ಇನ್ನು ಪಾಲಿಕೆ ವ್ಯಾಪ್ತಿಯ ಅದೆಷ್ಟೋ ಸರ್ಕಾರಿ ಆಸ್ತಿ ಮಾಯವಾಗಿದೆಯೋ ನೋಡಬೇಕು ಎಂದರು.

ಸರ್ಕಾರಿ ಆಸ್ತಿ ಕಬಳಿಸುವ ಟೀಮ್‌ ಬಳ್ಳಾರಿಯಲ್ಲಿ ಕೆಲಸ ಮಾಡುತ್ತಿದೆ. ಇದು ನಿಮಗೆ ಗೊತ್ತಿಲ್ಲವೇ? ಕಂದಾಯ ಅಧಿಕಾರಿ ಲಾಗಿನ್‌ನಿಂದಲೇ ಭೂ ಕಬಳಿಕೆಯಾಗಿದೆ ಎಂದು ಗೊತ್ತಿದ್ದೂ ಈವರೆಗೆ ಯಾಕೆ ಸುಮ್ಮನಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

SCROLL FOR NEXT