ಬಿ ವೈ ವಿಜಯೇಂದ್ರ 
ರಾಜ್ಯ

ಸಿಎಂ-ಡಿಸಿಎಂ ನಡುವಿನ ‘ಕುರ್ಚಿ ಯುದ್ಧ’ದಿಂದ ಜನರ ಸಮಸ್ಯೆ ಕೇಳಲು ಅವರಿಗೆ ಸಮಯವೇ ಇಲ್ಲ, ಸರ್ಕಾರಿ ಹುದ್ದೆ ಭರ್ತಿ ಮಾಡುವ ಭರವಸೆ ಈಡೇರಿಸಿಲ್ಲ: ಬಿ ವೈ ವಿಜಯೇಂದ್ರ

ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮ್ಮ ಚುನಾವಣಾಪೂರ್ವ ಭರವಸೆ ನೀಡಿದ್ದರು.

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಚುನಾವಣಾ ಭರವಸೆಯನ್ನು ಪಾಲಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರವಾಗಿ ಟೀಕಿಸಿದರು.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮ್ಮ ಚುನಾವಣಾಪೂರ್ವ ಭರವಸೆ ನೀಡಿದ್ದರು.

ರಾಹುಲ್ ಗಾಂಧಿ ಅವರು ಬೆಳಗಾವಿಗೆ ಬಂದಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಮುಖ್ಯಮಂತ್ರಿ ಎಲ್ಲವನ್ನೂ ಮರೆತಂತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವಿನ ‘ಕುರ್ಚಿ ಯುದ್ಧ’ದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವರಿಗೆ ಸಮಯವೇ ಇಲ್ಲ ಎಂದರು.

ಧಾರವಾಡ ಸೇರಿದಂತೆ ಬೆಂಗಳೂರು, ವಿಜಯಪುರ, ಬಾಗಲಕೋಟೆ, ಬೀದರ್ ಮುಂತಾದ ಕಡೆಗಳಲ್ಲಿ ನಡೆದ ಪ್ರತಿಭಟನೆಗಳನ್ನು ಉಲ್ಲೇಖಿಸಿದ ಅವರು, ಸರ್ಕಾರ ಕುಂಭಕರ್ಣನ ನಿದ್ರೆಯಲ್ಲಿ ಮುಳುಗಿದಂತಿದೆ, ಉದ್ಯೋಗ ಸೃಷ್ಟಿಸುವ ಮನೋಬಲವೇ ಇಲ್ಲ ಎಂದು ಕಿಡಿಕಾರಿದರು.

ಪ್ರತಿಭಟನೆಗಳ ನಡುವೆಯೂ ಅವರು ಇದರ ಬಗ್ಗೆ ಒಂದೇ ಮಾತನ್ನೂ ಆಡಿಲ್ಲ ಎಂದರು. ಎಲ್ಲ ಸಮಸ್ಯೆಗಳಿಗೂ ಹಿಂದಿನ ಬಿಜೆಪಿ ಸರ್ಕಾರವನ್ನೇ ದೋಷಾರೋಪಣೆ ಮಾಡುವುದು ಸರ್ಕಾರದ ಪ್ರವೃತ್ತಿಯಾಗಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT