ನಟಿ ರನ್ಯಾ ರಾವ್ 
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ED ಚಾರ್ಜ್‌ಶೀಟ್

ಈ ಚಿನ್ನವನ್ನು ದೇಶೀಯ ಮಾರುಕಟ್ಟೆಯಲ್ಲಿ ವಿತರಿಸಿ, ನಗದು ರೂಪದಲ್ಲಿ ಪಡೆದ ಹಣವನ್ನು ಹವಾಲಾ ಮಾರ್ಗ ಹಾಗೂ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಕಾನೂನುಬದ್ಧ ವ್ಯವಹಾರಗಳಂತೆ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ.

ನವದೆಹಲಿ/ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಹಾಗೂ ಇಬ್ಬರು ಸಹಚರರ ವಿರುದ್ಧ ಚಿನ್ನ ಕಳ್ಳಸಾಗಣೆ ಮತ್ತು ಹಣಕಾಸು ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಚಾರ್ಜ್‌ಶೀಟ್ ಸಲ್ಲಿಸಿದೆ.

ಇಡಿ ಮಾಹಿತಿ ಪ್ರಕಾರ, ಮಾರ್ಚ್ 2024ರಿಂದ ಮಾರ್ಚ್ 2025ರವರೆಗೆ ಸುಮಾರು 127.287 ಕೆ.ಜಿ. ವಿದೇಶೀ ಮೂಲದ ಚಿನ್ನ (ಮೌಲ್ಯ ರೂ.102.55 ಕೋಟಿ) ಭಾರತಕ್ಕೆ ಕಳ್ಳಸಾಗಣೆ ಮಾಡಲಾಗಿದೆ.

ಈ ಚಿನ್ನವನ್ನು ದೇಶೀಯ ಮಾರುಕಟ್ಟೆಯಲ್ಲಿ ವಿತರಿಸಿ, ನಗದು ರೂಪದಲ್ಲಿ ಪಡೆದ ಹಣವನ್ನು ಹವಾಲಾ ಮಾರ್ಗ ಹಾಗೂ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಕಾನೂನುಬದ್ಧ ವ್ಯವಹಾರಗಳಂತೆ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣವು ಡಿಆರ್‌ಐ ನೀಡಿದ ದೂರಿನ ಆಧಾರದಲ್ಲಿ ಸಿಬಿಐ ದಾಖಲಿಸಿದ ಪ್ರಕರಣದಿಂದ ಆರಂಭಗೊಂಡಿದ್ದು, ಪಿಎಂಎಲ್‌ಎ ಅಡಿಯಲ್ಲಿ ಇಡಿ ತನಿಖೆ ಕೈಗೊಂಡಿದೆ.

ರನ್ಯಾ ರಾವ್ ಅವರನ್ನು 2025ರ ಮಾರ್ಚ್ 3ರಂದು ದುಬೈಯಿಂದ ಬೆಂಗಳೂರಿಗೆ ಆಗಮಿಸಿದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಈ ವೇಳೆ ಅವರಿಂದ 14.213 ಕೆ.ಜಿ. ಚಿನ್ನ (ರೂ.12.56 ಕೋಟಿ ಮೌಲ್ಯ) ವಶಪಡಿಸಿಕೊಳ್ಳಲಾಗಿತ್ತು. ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ರೂ.2.06 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ರೂ.2.67 ಕೋಟಿ ನಗದು ಪತ್ತೆಯಾಗಿತ್ತು.

ಇಡಿ ತನಿಖೆಯಲ್ಲಿ ರನ್ಯಾ ಹೆಸರಿನಲ್ಲಿರುವ ರೂ.34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ.

ಈ ಕಳ್ಳಸಾಗಣೆ ಜಾಲವು ವಿದೇಶದಲ್ಲಿ ಚಿನ್ನ ಖರೀದಿ, ಅಕ್ರಮವಾಗಿ ಭಾರತಕ್ಕೆ ಕಳ್ಳಸಾಗಣೆ, ನಗದು ಮಾರಾಟ ಮತ್ತು ಹವಾಲಾ-ಬ್ಯಾಂಕಿಂಗ್ ಮಾರ್ಗಗಳ ಮೂಲಕ ನಂತರದ ಆದಾಯದ ಅಕ್ರಮ ವರ್ಗಾವಣೆಯನ್ನು ಒಳಗೊಂಡ ಸಂಘಟಿತ ಮತ್ತು ರಚನಾತ್ಮಕ ಕಾರ್ಯವಿಧಾನವನ್ನು ತನಿಖೆಯು ಮತ್ತಷ್ಟು ಬಹಿರಂಗಪಡಿಸಿದೆ.

ಇಂತಹ ಚಟುವಟಿಕೆಗಳು ಕಾನೂನು ವ್ಯಾಪಾರ ಮತ್ತು ಹಣಕಾಸು ವ್ಯವಸ್ಥೆಗಳನ್ನು ಹಾಳು ಮಾಡುವುದಲ್ಲದೆ, ಗಡಿಯಾಚೆಗಿನ ವಹಿವಾಟುಗಳನ್ನು ನಿಯಂತ್ರಿಸಲು ಉದ್ದೇಶಿಸಲಾದ ಸಂಸ್ಥೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕ್ಷೀಣಿಸುತ್ತವೆ ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!