ಅವಧಿ ಮೀರಿದ ಆಹಾರ 
ರಾಜ್ಯ

ಬೆಳಗಾವಿ: ಅಂಗನವಾಡಿಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ; ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಪರಿಶೀಲನೆ ವೇಳೆ ಮೂರುರಿಂದ ಆರು ತಿಂಗಳ ಹಿಂದೆಯೇ ಅವಧಿ ಮುಗಿದ ಆಹಾರ ವಸ್ತುಗಳನ್ನು ಮಕ್ಕಳಿಗೆ ವಿತರಿಸುತ್ತಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.

ಬೆಳಗಾವಿ: ಬೆಳಗಾವಿಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಮಕ್ಕಳ ಪೌಷ್ಟಿಕಾಂಶ ಕಾರ್ಯಕ್ರಮಗಳ ಸುರಕ್ಷತೆ ಮತ್ತು ಮೇಲ್ವಿಚಾರಣೆಯ ಬಗ್ಗೆ ಕಳವಳ ವ್ಯಕ್ತವಾಗುವಂತೆ ಮಾಡಿದೆ.

ಕನ್ನಡ ಹೋರಾಟಗಾರ್ತಿ ಕಸ್ತೂರಿ ಬಾವಿ ಅವರು, ಸ್ಥಳೀಯ ಯುವಕರೊಂದಿಗೆ ಗ್ರಾಮದಲ್ಲಿನ ಮೂರು ಅಂಗನವಾಡಿ ಕೇಂದ್ರಗಳ ಆಹಾರ ಸಂಗ್ರಹವನ್ನು ಪರಿಶೀಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಪರಿಶೀಲನೆ ವೇಳೆ ಮೂರುರಿಂದ ಆರು ತಿಂಗಳ ಹಿಂದೆಯೇ ಅವಧಿ ಮುಗಿದ ಆಹಾರ ವಸ್ತುಗಳನ್ನು ಮಕ್ಕಳಿಗೆ ವಿತರಿಸುತ್ತಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.

ಈ ಕುರಿತ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ. ವಿಡಿಯೋಗಳಲ್ಲಿ ಹುಳು ಹಿಡಿದ ರವೆ, ಸಿರಿಧಾನ್ಯ ಲಡ್ಡು, ಸಾಂಬಾರ್ ಪುಡಿ ಹಾಗೂ ಸಾಸಿವೆ ಪ್ಯಾಕೆಟ್‌ಗಳ ಮೇಲೆ ಅಕ್ಟೋಬರ್ ಮತ್ತು ನವೆಂಬರ್ 2025ರ ಅವಧಿ ದಿನಾಂಕಗಳಿರುವುದು ಕಂಡು ಬಂದಿದೆ.

2025ರಲ್ಲೇ ಅವಧಿ ಮುಗಿದ ಸಿರಿಧಾನ್ಯ ಲಡ್ಡುಗಳನ್ನು 2026ರ ಫೆಬ್ರವರಿಯಲ್ಲಿ ವಿತರಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಮಾಹಿತಿ ಪೋಷಕರಲ್ಲಿ ಆತಂಕ ಮೂಡಿಸಿದೆ.

“ಇದು ಚಿಕ್ಕ ಮಕ್ಕಳ ಜೀವದ ಜೊತೆ ಆಟವಾಡುವಂತದ್ದು. ಏನಾದರೂ ಅನಾಹುತ ಸಂಭವಿಸಿದರೆ ಹೊಣೆ ಯಾರು?” ಎಂದು ಕಸ್ತೂರಿ ಬಾವಿ ಅವರು ಪ್ರಶ್ನಿಸಿದ್ದಾರೆ. ಈ ಸಮಸ್ಯೆ ಒಂದೇ ಗ್ರಾಮಕ್ಕೆ ಸೀಮಿತವಲ್ಲದೆ ಬೇರೆಡೆಗಳಲ್ಲಿಯೂ ಇರಬಹುದೆಂಬ ಶಂಕೆಯನ್ನೂ ವ್ಯಕ್ತಪಡಿಸಿದ್ದಾರೆ.

ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಆರೋಪಗಳನ್ನು ತಳ್ಳಿ ಹಾಕಿದ್ದು, ಫೆಬ್ರವರಿ 7ರಂದು ನಡೆದ ಪರಿಶೀಲನೆಯಲ್ಲಿ ಅವಧಿ ಮೀರಿದ ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ವೈರಲ್ ವಿಡಿಯೋಗಳು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದು, ಇದೊಂದು ಪಿತೂರಿಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT