ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ 
ರಾಜ್ಯ

5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ: ಸತ್ಯ ಒಪ್ಪಿಕೊಂಡ ರಾಜ್ಯ ಸರ್ಕಾರ

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

‘ಕುಸುಮ ಸಂಜೀವಿನಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ ಎಂದು ಹೇಳಿದ್ದಾರೆ.

ಸಂಕಷ್ಟದ ಸಮಯದಲ್ಲಿ ಜನರು ಮಾನಸಿಕವಾಗಿ ಕುಗ್ಗದಂತೆ, ಕುಟುಂಬಗಳಿಗೆ ಆರ್ಥಿಕ ಭದ್ರತೆ ಸಿಗಲೆಂಬ ಉದ್ದೇಶದಿಂದಲೇ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇವು ಕೇವಲ ಹಣಕಾಸು ನೆರವು ಅಲ್ಲ; ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ಕ್ರಮವಾಗಿದೆ ಎಂದು ತಿಳಿಸಿದರು.

ಉದ್ಯೋಗ ವಿಚಾರವಾಗಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ನೇಮಕಾತಿಗೆ ಸರ್ಕಾರ ಬದ್ಧವಾಗಿದೆ. ಖಾಲಿ ಹುದ್ದೆಗಳ ಭರ್ತಿ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಿಯಮಿತತೆಗಳಿಂದ ಹಲವು ಹುದ್ದೆಗಳು ಖಾಲಿ ಉಳಿದಿವೆ ಎಂದು ಇದೇ ವೇಳೆ ಆರೋಪಿಸಿದರು.

ಕೆಪಿಎಸ್‌ಸಿ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ನೇಮಕಾತಿ ಜವಾಬ್ದಾರಿ ನೀಡಲಾಗಿದೆ. ಯುವನಿಧಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಯುವಕರಿಗೆ ನೆರವು ನೀಡಲಾಗುತ್ತಿದೆ ಎಂದರು.

ಮೂಲಸೌಕರ್ಯ ಅಭಿವೃದ್ಧಿ ಕುರಿತು ಮಾತನಾಡಿದ ಅವರು, 2027ರೊಳಗೆ ಮೆಟ್ರೋ ಜಾಲವನ್ನು 175 ಕಿ.ಮೀ.ಗೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಡಬಲ್ ಡೆಕ್ಕರ್ ಫ್ಲೈಓವರ್‌ಗಳ ಕುರಿತು ಕೇಂದ್ರ ಸಚಿವಾಲಯದೊಂದಿಗೆ ಚರ್ಚೆ ನಡೆಯುತ್ತಿದೆ. ಹಿಂದಿನ ಟೆಂಡರ್ ಪ್ರಕ್ರಿಯೆಗಳಲ್ಲಿ ಸಮರ್ಪಕ ಹಣಕಾಸು ಯೋಜನೆ ಇಲ್ಲದಿದ್ದ ಕಾರಣ ಗುತ್ತಿಗೆದಾರರಿಗೆ ಬಾಕಿ ಪಾವತಿಗಳ ಸಮಸ್ಯೆ ಉಂಟಾಗಿದೆ. ಪ್ರಸ್ತುತ ಸರ್ಕಾರ ಹಣಕಾಸು ಶಿಸ್ತನ್ನು ಕಾಪಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಲು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!