ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಇನ್ನೂ ಫೆಬ್ರವರಿ ತಿಂಗಳು ಅಂತ್ಯವಾಗಿಲ್ಲ. ಆದರೆ ಒಂದು ಕಾಲದಲ್ಲಿ ಉತ್ತಮ ಹವಾಮಾನಕ್ಕೆ ಹೆಸರುವಾಸಿಯಾದ ಬೆಂಗಳೂರು ನಗರದಲ್ಲಿ ಈಗಾಗಲೇ ತೀವ್ರ ಬಿಸಿಲು ಕಾಣುತ್ತಿದೆ. ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಶನಿವಾರದಿಂದ (ಫೆ 21) ನಗರದ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಐಟಿ ರಾಜಧಾನಿಯಾಗಿ ಬದಲಾದ ನಂತರ ನಗರದಲ್ಲಿ ಕಳೆದ ಎರಡು ದಶಕಗಳಲ್ಲಿ ಫೆಬ್ರವರಿಯಲ್ಲಿ ನಗರದ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಅಭಿವೃದ್ಧಿಗಾಗಿ ಸಾಕಷ್ಟು ಮರಗಳನ್ನು ಕಡಿಯಲಾಗುತ್ತಿದ್ದು, ಕಾಂಕ್ರೀಟೀಕರಣ ಹೆಚ್ಚಿದೆ. ಇದರ ಪರಿಣಾಮವಾಗಿ ಆದ್ದರಿಂದ ನಗರದ ಉಷ್ಣಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಫೆಬ್ರವರಿ 21 ರಂದು ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಫೆಬ್ರವರಿ 22 ರಂದು 32.4 ಡಿಗ್ರಿ, ಫೆಬ್ರವರಿ 23 ರಂದು 32.8 ಡಿಗ್ರಿ, ಫೆಬ್ರವರಿ 24 ರಂದು 31.1 ಡಿಗ್ರಿ ಮತ್ತು ಫೆಬ್ರವರಿ 25 ರಂದು ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಡೇಟಾ ಪ್ರಕಾರ ನಗರದಲ್ಲಿ 2025, 2024, 2021, 2019 ಮತ್ತು 2016 ರಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಫೆಬ್ರವರಿ 17, 2005 ರಂದು ಸಾರ್ವಕಾಲಿಕ ಗರಿಷ್ಠ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಆರಂಭಿಕ ಬಿಸಿಲಿನ ಧಗೆ ಉಲ್ಲೇಖಿಸಿ, ಆರೋಗ್ಯ ತಜ್ಞರು ಬೇಸಿಗೆಯಲ್ಲಿ ಜಠರಗರುಳಿನ ಸೋಂಕಿನ ಬಗ್ಗೆ ಎಚ್ಚರಿಸಿದ್ದಾರೆ. ಬೇಸಿಗೆಯಲ್ಲಿ ಬಿಸಿಲಿನ ಬೇಗೆಯನ್ನು ಕಡಿಮೆ ಮಾಡಿಕೊಳ್ಳಲು ಹೆಚ್ಚಿನ ನೀರು ಕುಡಿಯಬೇಕು ಮತ್ತು ಮಧ್ಯಾಹ್ನ ಮತ್ತು 3 ಗಂಟೆಯ ನಡುವೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ 'ಸುಪ್ರೀಂ' ಜಾಮೀನು!

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

SCROLL FOR NEXT