ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ ಬಳಸುತ್ತಿರುವ ಪ್ರಯಾಣಿಕ. 
ರಾಜ್ಯ

ಫೆಬ್ರವರಿಯಲ್ಲೇ ಮಾರ್ಚ್ ತಿಂಗಳ ಬಿಸಿಲು: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ, ಈ ಬಾರಿ ವಾಡಿಕೆಗಿಂತ ಅಧಿಕ ಬಿಸಿಲು ಸಾಧ್ಯತೆ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿರು ಬಿಸಿಲಿಗೆ ಜನತೆ ತತ್ತರಿಸಿ ಹೋಗುತ್ತಿದ್ದಾರೆ.

ಬೆಂಗಳೂರು: ಈ ಬಾರಿ ಅವಧಿಗೂ ಮುನ್ನವೇ ಬೇಸಿಗೆ ಆರಂಭವಾಗಿರುವಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಬೇಸಿಗೆ, ಈ ಬಾರಿ ಫೆಬ್ರವರಿಯಲ್ಲೇ ಶುರುವಾಗಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿರು ಬಿಸಿಲಿಗೆ ಜನತೆ ತತ್ತರಿಸಿ ಹೋಗುತ್ತಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಶನಿವಾರ (ಫೆಬ್ರವರಿ 21) ದಿಂದ ನಗರದ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ದಾಟಿದೆ ಎಂದು ತಿಳಿದುಬಂದಿದೆ.

ಮಾರ್ಚ್‌ನಲ್ಲಿ ಅಧಿಕೃತವಾಗಿ ಬೇಸಿಗೆ ಪ್ರಾರಂಭವಾಗುವ ಮೊದಲು, ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರಿನಲ್ಲಿ ತಾಪಮಾನ ಇದ್ದಕ್ಕಿದ್ದಂತೆ ಏರುತ್ತದೆ, ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತದೆ ಎಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿ 21ರಂದು 30.8°C, 22ರಂದು 32.4°C, 23ರಂದು 32.8°C, 24ರಂದು 31.1°C ಹಾಗೂ 25ರಂದು 31.6°C ದಾಖಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿಯೂ ಫೆಬ್ರವರಿಯಲ್ಲಿ 34°C ಮೀರಿದ ಉಷ್ಣಾಂಶ ದಾಖಲಾಗಿರುವುದು ಗಮನಾರ್ಹ. ಫೆಬ್ರವರಿ 17, 2005 ರಂದು ಸಾರ್ವಕಾಲಿಕ ಗರಿಷ್ಠ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಜಠರಗರುಳಿನ ಸೋಂಕುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬಿಸಿಲ ಝಳವನ್ನು ಎದುರಿಸಲು ಮಧ್ಯಾಹ್ನ 12ರಿಂದ 3ರ ನಡುವೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಹಾಗೂ ಸಾಕಷ್ಟು ನೀರು ಕುಡಿಯುವಂತೆ ಸಲಹೆ ನೀಡಿದ್ದಾರೆ.

2018-2025 ಫೆಬ್ರವರಿ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಕಂಡು ಬಂದ ತಾಪಮಾನ ಇಂತಿದೆ...

  • 2018 ಫೆಬ್ರವರಿ 28 33 ಡಿಗ್ರಿ ಸೆಲ್ಸಿಯಸ್

  • 2019 ಫೆಬ್ರವರಿ 26 35.5 ಡಿಗ್ರಿ ಸೆಲ್ಸಿಯಸ್

  • 2020 ಫೆಬ್ರವರಿ 16 33.1 ಡಿಗ್ರಿ ಸೆಲ್ಸಿಯಸ್

  • 2021 ಫೆಬ್ರವರಿ 27 34.1 ಡಿಗ್ರಿ ಸೆಲ್ಸಿಯಸ್

  • 2022 ಫೆಬ್ರವರಿ 22 31.8 ಡಿಗ್ರಿ ಸೆಲ್ಸಿಯಸ್

  • 2023 ಫೆಬ್ರವರಿ 16 30.9 ಡಿಗ್ರಿ ಸೆಲ್ಸಿಯಸ್

  • 2024 ಫೆಬ್ರವರಿ 24 34.5 ಡಿಗ್ರಿ ಸೆಲ್ಸಿಯಸ್

  • 2025 ಫೆಬ್ರವರಿ 20 34.4 ಡಿಗ್ರಿ ಸೆಲ್ಸಿಯಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel