ಡಿ.ಕೆ ಶಿವಕುಮಾರ್ 
ರಾಜ್ಯ

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ; 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿ.ಕೆ ಶಿವಕುಮಾರ್

"ಮಾಧ್ಯಮಗಳು ಯಾವುದನ್ನೂ ಸಹ ತಿರುಚುವುದು ಬೇಡ. ಯಾವ ಕಾರಣಕ್ಕೂ ಯಾವ ಗ್ಯಾರಂಟಿಗಳೂ ನಿಲ್ಲುವುದಿಲ್ಲ. ಎಷ್ಟೇ ಕಷ್ಟ ಇದ್ದರೂ ಸಹ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದೇವೆ ಎಂದು ಹೇಳಿದ್ದೇನೆ.

ಬೆಂಗಳೂರು: ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು - ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಉತ್ತರಿಸಿದರು.ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, "ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಹೇಳಿದ್ದಾರೆ. ಅದಕ್ಕೆ ನಾವು ಆ ಬಗ್ಗೆ ವಿಮರ್ಶೆ ಮಾಡುತ್ತಿದ್ದೇವೆ" ಎಂದು ಹೇಳಿದರು.

"ಮಾಧ್ಯಮಗಳು ಯಾವುದನ್ನೂ ಸಹ ತಿರುಚುವುದು ಬೇಡ. ಯಾವ ಕಾರಣಕ್ಕೂ ಯಾವ ಗ್ಯಾರಂಟಿಗಳೂ ನಿಲ್ಲುವುದಿಲ್ಲ. ಎಷ್ಟೇ ಕಷ್ಟ ಇದ್ದರೂ ಸಹ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದೇವೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎನ್ನುವ ಸುಳ್ಳಿನ ಬಗ್ಗೆಯೂ ಸ್ಪಷ್ಟನೆ ನೀಡಿದ್ದೇನೆ. ಈ ಬಜೆಟ್ ನಲ್ಲಿ ಒಳ್ಳೊಳ್ಳೆ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡುತ್ತದೆ" ಎಂದು ಹೇಳಿದರು.

"ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ ಸಹ ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್