ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿ ಬಿದ್ದಿರುವುದು  
ರಾಜ್ಯ

ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ.

ರಾಯಚೂರು: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು. ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ.

ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

SCROLL FOR NEXT