ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿ ಬಿದ್ದಿರುವುದು  
ರಾಜ್ಯ

ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ.

ರಾಯಚೂರು: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು. ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ.

ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಅವಘಡ, ಬಾಲಕಿ ಸಾವು, 9 ಮಂದಿಗೆ ಗಾಯ

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

SCROLL FOR NEXT