ಸಲೂನ್ ಶಾಪ್ ತೆರೆದ ಸರ್ಕಾರ 
ರಾಜ್ಯ

ಗದಗದಲ್ಲಿ ದಲಿತರಿಗೆ ಶೇವಿಂಗ್- ಕಟಿಂಗ್ ಮಾಡಲು ನಿರಾಕರಣೆ: ಸಲೂನ್ ಶಾಪ್ ತೆರೆದ ಸರ್ಕಾರ!

ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದ ವಿಚಿತ್ರ ಘಟನೆಗಳ ನಂತರ, ದಲಿತರಿಗೆ ಕ್ಷೌರ ಮಾಡಿಸಲು ರಾಜ್ಯ ಸರ್ಕಾರವೇ ಕ್ಷೌರದಂಗಡಿಯನ್ನು ತೆರೆದಿದೆ.

ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ ಹೆಸರಿನಲ್ಲಿ ದಲಿತರಿಗೆ ಕ್ಷೌರ ಸೇವೆ ನಿರಾಕರಿಸುತ್ತಿದ್ದವು. ಉದ್ವಿಗ್ನತೆ ಹೆಚ್ಚಾದಾಗ, ಸ್ಥಳೀಯ ಆಡಳಿತ ಅಧಿಕಾರಿಗಳು ಗ್ರಾಮಕ್ಕೆ ತಲುಪಿ ಶಾಂತಿ ಸಭೆಗಳನ್ನು ನಡೆಸಿದರು. ಆದರೆ ಅವರ ಪ್ರಯತ್ನಗಳ ಹೊರತಾಗಿಯೂ, ಕ್ಷೌರಿಕರು ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದರು. ಆಡಳಿತವು ಅಂಗಡಿಗೆ ನೋಟಿಸ್ ನೀಡಿ ಅದನ್ನು ಮುಚ್ಚಲು ಸೂಚಿಸಿತು.

ಗುರುವಾರ, ಸಮಾಜ ಕಲ್ಯಾಣ ಇಲಾಖೆಯು ದಲಿತರು ಮತ್ತು ಇತರ ಗ್ರಾಮಸ್ಥರು ಕ್ಷೌರ ಮಾಡಿಸಿಕೊಳ್ಳಬಹುದಾದ ಹೊಸ ಕ್ಷೌರದಂಗಡಿಯನ್ನು ತೆರೆದಿತು. ಆದರೆ ದಲಿತರ ಪ್ರವೇಶಕ್ಕೆ ವಿರೋಧವಿರುವ ಕಡೆ ಸರ್ಕಾರ ಕ್ಷೌರದಂಗಡಿಗಳು, ದೇವಾಲಯಗಳು ಮತ್ತು ಹೋಟೆಲ್‌ಗಳನ್ನು ನಿರ್ಮಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ದಲಿತ ಕಾರ್ಯಕರ್ತರು ಹೇಳಿದ್ದಾರೆ.

ಗ್ರಾಮದ ಕ್ಷೌರಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು . ದಲಿತರು ತಾರತಮ್ಯವನ್ನು ಎದುರಿಸದಂತೆ ನೋಡಿಕೊಳ್ಳಲು ಹೊಸ ಕಾನೂನುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಗದಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಂದಾ ಹಣಬಟ್ಟಿ ಅಂಗಡಿಯನ್ನು ಉದ್ಘಾಟಿಸಿ, ಜನರು ಮೇಲು-ಕೀಳು ಎಂಬ ಭಾವನೆಗಳನ್ನು ಬಿಟ್ಟು ಎಲ್ಲರೂ ಸಮಾನರು ಎಂಬ ಉದಾತ್ತ ಮನಸ್ಥಿತಿಯೊಂದಿಗೆ ಬದುಕಬೇಕೆಂದು ಕರೆ ನೀಡಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಂದ್ರನ ಮೇಲೆ ಸಂಶೋಧನೆ ನಡೆಯುತ್ತಿರುವಾಗಲೂ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿರುವುದು ದುರದೃಷ್ಟಕರ ಎಂದು ತಹಶೀಲ್ದಾರ್ ಪಿ.ಎಸ್.ಎರ್ರಿಸ್ವಾಮಿ ಬೇಸರ ವ್ಯಕ್ತ ಪಡಿಸಿದರು.

ಸಾಮಾಜಿಕ ಬಹಿಷ್ಕಾರಕ್ಕೆ ಸೂಕ್ತ ಕ್ರಮ : ತಹಶೀಲ್ದಾರ್

ಕ್ಷೌರಿಕ ಸೇವೆಗಳನ್ನು ನೀಡಲು ನಿರಾಕರಿಸುವುದು ಮತ್ತು ಹೋಟೆಲ್‌ಗಳು ಮತ್ತು ದೇವಾಲಯಗಳಿಗೆ ಪ್ರವೇಶ ನಿರಾಕರಿಸುವುದು ಕಾನೂನುಬಾಹಿರ ಕೃತ್ಯಗಳು. ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡಲು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅಂತಹ ತಾರತಮ್ಯ ಪದ್ಧತಿಗಳು ಎಲ್ಲಿಯಾದರೂ ಕಂಡುಬಂದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಪಿ.ಎಸ್.ಎರ್ರಿಸ್ವಾಮಿ ಹೇಳಿದರು.

ದಲಿತ ಕಾರ್ಯಕರ್ತ ಕರಿಯಪ್ಪ ಗುಡಿಮನಿ ಮಾತನಾಡಿ, ಸರ್ಕಾರವು ಕ್ಷೌರ ಅಂಗಡಿಯನ್ನು ತೆರೆಯುವುದು ಸ್ವಾಗತಾರ್ಹ ಕ್ರಮವಾಗಿದೆ, ಆದರೆ ಅದು ನಿಜವಾದ ಸಾಮರಸ್ಯದ ಮನೋಭಾವವನ್ನು ಪೂರೈಸುವುದಿಲ್ಲ. "ಅಸ್ತಿತ್ವದಲ್ಲಿರುವ ಕಾನೂನಿನ ಹೊರತಾಗಿಯೂ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಅನೇಕ ಹಳ್ಳಿಗಳು ಅಸ್ಪೃಶ್ಯತೆಯನ್ನು ಆಚರಿಸುತ್ತಿವೆ. ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈ ಸಮಸ್ಯೆ ಬಹಳ ಹಿಂದಿನಿಂದಲೂ ಇದೆ. ದಲಿತರು ಎಲ್ಲಾ ದೇವಸ್ಥಾನ, ಕ್ಷೌರಿಕನ ಅಂಗಡಿ ಅಥವಾ ಹೋಟೆಲ್‌ಗೆ ಪ್ರವೇಶಿಸಲು ಸಾಧ್ಯವಾಗಬೇಕು. ಹಳ್ಳಿಗಳಲ್ಲಿ ದಿನಸಿ ಅಂಗಡಿಗಳಿಗೆ ಹೋದಾಗಲೂ ಅವರು ತಾರತಮ್ಯವನ್ನು ಎದುರಿಸುತ್ತಾರೆ. ಸರ್ಕಾರ ಅವರಿಗಾಗಿ ಅಂಗಡಿ ತೆರೆಯುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

SCROLL FOR NEXT