ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ NCB: 8 ಕೋಟಿ ರೂ. ಮೌಲ್ಯದ 160 ಕೆಜಿ ಖಾಟ್ ಎಲೆಗಳು​​ ವಶಕ್ಕೆ​..!

2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಬೆಂಗಳೂರು: ಬೆಂಗಳೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಖಾಟ್ ಎಲೆಗಳ ಅಕ್ರಮ ಸಾಗಣೆ ಅಂತಾರಾಷ್ಟ್ರೀಯ ಜಾಲವನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ಭೇದಿಸಿದೆ.

ಈ ಕಾರ್ಯಾಚರಣೆಯಲ್ಲಿ 8 ಕೋಟಿ ರೂ. ಮೌಲ್ಯದ 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಈ ಅಕ್ರಮ ವಸ್ತುಗಳನ್ನು ಇಥಿಯೋಪಿಯಾದಿಂದ ಕೀನ್ಯಾ ಮೂಲಕ ಭಾರತಕ್ಕೆ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ ಈ ಜಾಲ ಸಕ್ರಿಯವಾಗಿರುವ ಮಾಹಿತಿ ದೊರೆತಿದೆ.

ಈ ಜಾಲವು ಉತ್ತರ ಅಮೆರಿಕಾ, ಯುರೋಪ್, ಗಲ್ಫ್ ರಾಷ್ಟ್ರಗಳು ಮತ್ತು ಮಧ್ಯಪ್ರಾಚ್ಯಕ್ಕೆ ಸುಮಾರು 2,100 ಕಿಲೋಗ್ರಾಂ ತೂಕದ 550ಕ್ಕೂ ಹೆಚ್ಚು ಪಾರ್ಸೆಲ್‌ಗಳನ್ನು ಕಳುಹಿಸಿದೆ ಎಂದು ಮಾಹಿತಿ ನೀಡಿದೆ.

ವಾಣಿಜ್ಯ ವಸ್ತುಗಳಂತೆ ಪ್ಯಾಕ್ ಮಾಡಿ ಅಂತರರಾಷ್ಟ್ರೀಯ ಅಂಚೆ ಹಾಗೂ ಕೂರಿಯರ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಈ ವಸ್ತುವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬೆಂಗಳೂರನ್ನು ಸಂಗ್ರಹಣೆ ಮತ್ತು ವಿತರಣೆ ಕೇಂದ್ರವಾಗಿ ಉಪಯೋಗಿಸಿ, ದೊಡ್ಡ ಪ್ರಮಾಣದ ವಸ್ತುಗಳನ್ನು ಸಣ್ಣ ಪಾಲುಗಳಾಗಿ ವಿಭಜಿಸಿ ಕಳುಹಿಸಲಾಗುತ್ತಿತ್ತು.

ಈ ಜಾಲದಲ್ಲಿರುವ ಹೆಚ್ಚಿನವರು ವಿದೇಶಿ ಪ್ರಜೆಗಳೇ ಆಗಿದ್ದು, ಕೆಲ ಸ್ಥಳೀಯರ ಸಹಕಾರ ಕೂಡ ಇದೆ ಎಂದು ಎನ್‌ಸಿಬಿ ತಿಳಿಸಿದೆ.

ವಿದ್ಯಾರ್ಥಿ ವೀಸಾ ಮತ್ತು ವೈದ್ಯಕೀಯ ವೀಸಾ ಮೇಲೆ ಭಾರತದಲ್ಲಿದ್ದ ಕೆಲವರು ಕೂಡ ಇದರ ಭಾಗವಾಗಿರುವ ಅನುಮಾನವಿದೆ. ಈ ಸಂಬಂಧ ತನಿಖೆ ಮುಂದುವರಿದಿದ್ದು, ಮತ್ತಷ್ಟು ಜನರು ಬಂಧನಕ್ಕೊಳಗಾಗಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Switzerlandನ ಕ್ರಾನ್ಸ್–ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ವಿಡಿಯೋ ಬಿಡುಗಡೆ ಮಾಡಿದ ರಷ್ಯಾ, ಝೆಲೆನ್ಸ್ಕಿ ಇನ್ನು ಬಂಕರ್‌ನಲ್ಲೇ ಎಂದು ಶಪಥ..!

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ರಷ್ಯಾ ಆರೋಪ ತಳ್ಳಿಹಾಕಿದ ಯುಎಸ್ ಇಂಟೆಲಿಜೆನ್ಸಿ! ಹೇಳಿದ್ದು ಏನು?

ಭಾರತ-ಪಾಕಿಸ್ತಾನ ಸೇನಾ ಸಂಘರ್ಷ: ಚೀನಾದ ಮಧ್ಯಸ್ಥಿಕೆ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ, ಓವೈಸಿ ಕಿಡಿ!

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ

SCROLL FOR NEXT