ಸಹಾಯಕ ಪೊಲೀಸ್ ಮಹಾ ನಿರ್ದೇಶಕ ಹೀತೇಂದ್ರ  
ರಾಜ್ಯ

ಬಳ್ಳಾರಿ: 'ಬ್ಯಾನರ್ ಗಲಾಟೆ' ವೇಳೆ ಘರ್ಷಣೆ, ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ, ನಾಲ್ಕು ಪ್ರಕರಣ ದಾಖಲು!

ಘಟನೆ ಸಂಬಂಧ ಈಗಾಗಲೇ ಐದು ಗನ್ ಸೀಜ್ ಮಾಡಿದ್ದೇವೆ. ಇನ್ನಷ್ಟು ಜನರ ಗನ್ ವಶಕ್ಕೆ ಪಡೆದುಕೊಳ್ಳುತ್ತೇವೆ ಎಂದು ಹಿತೇಂದ್ರ ತಿಳಿಸಿದರು.

ಬಳ್ಳಾರಿ: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಸಂಬಂಧ ನಾಲ್ಕು ಪ್ರಕರಣ ದಾಖಲಾಗಿದೆ ಎಂದು ರಾಜ್ಯದ ಸಹಾಯಕ ಪೊಲೀಸ್ ಮಹಾ ನಿರ್ದೇಶಕ ಹೀತೇಂದ್ರ ಶುಕ್ರವಾರ ತಿಳಿಸಿದರು.

ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ನಿನ್ನೆ ಸಂಜೆ 6.30 ಕ್ಕೆ ಕಲ್ಲು ತೂರಾಟವಾಗಿದೆ. ನಂತರ ಮುಗಿಯಿತು ಅನ್ನೋಷ್ಟರಲ್ಲಿ ಮತ್ತೊಮ್ಮೆ ಒಂಬತ್ತು ಗಂಟೆಗೆ ಗಲಾಟೆ ನಡೆದಿದೆ. ಒಂದು ಗುಂಪಿನಿಂದ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಬಳಿಕ ಪೊಲೀಸರು ಆಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದರು.

ಘಟನೆ ಸಂಬಂಧ ಈಗಾಗಲೇ ಐದು ಗನ್ ಸೀಜ್ ಮಾಡಿದ್ದೇವೆ. ಇನ್ನಷ್ಟು ಜನರ ಗನ್ ವಶಕ್ಕೆ ಪಡೆದುಕೊಳ್ಳುತ್ತೇವೆ. ಯಾವ ಗನ್ ನಿಂದ ಬುಲೆಟ್ ಹಾರಿದೆ. ಅದು ಯಾರದ್ದು? ಯಾರು ನಿಯಮ ಉಲ್ಲಂಘಿಸಿದ್ದಾರೆ ಎಂಬುದನ್ನು FSL ಪರೀಕ್ಷೆಯಿಂದ ತಿಳಿದುಕೊಳ್ಳಲಾಗುವುದು ಎಂದರು.

ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಈಗಾಗಲೇ ಪ್ರಕರಣ ಸಂಬಂಧಿಸಿದಂತೆ ನಾಲ್ಕು ದೂರು ದಾಖಲಾಗಿದೆ. ರಾಜಶೇಖರ ಸಹೋದರ ಹತ್ಯೆ ಬಗ್ಗೆ ದೂರು ನೀಡಿದ್ದಾರೆ. ವಾಲ್ಮೀಕಿ ಅವಮಾನ ಮಾಡಿದ್ದಾರೆ ಎಂದು ಮತ್ತೊಂದು ಪ್ರಕರಣ ದಾಖಲಾಗಿದ್ದು, ಸೋಮೊಟೋ‌ ಕೇಸ್ ನ್ನು ಸಹ ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಇನ್ನೆರಡು ಕೇಸ್ ದಾಖಲಾಗೋದಿದೆ. ಬಿಜೆಪಿಯವರು ದೂರು ಕೊಡೋ ನಿರೀಕ್ಷೆ ಇದೆ. ಯಾರನ್ನು ಈವರೆಗೂ ಬಂಧಿಸಿಲ್ಲ. ಯಾರು ದೂರು ಕೊಟ್ಟರೂ ತೆಗೆದುಕೊಳ್ಳುತ್ತೇವೆ ಎಂದರು.

ಪೊಲೀಸರ ಬಗ್ಗೆ ವೈಫಲ್ಯದ ಬಗ್ಗೆಯೂ ತನಿಖೆ ನಡೆಸುತ್ತೇವೆ. ರಾಜಕಾರಣಿಗಳ ಒತ್ತಡವಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಸಿಸಿ ಟಿವಿ ಮತ್ತು ಮಾಧ್ಯಮ ಕ್ಯಾಮರ ಪರಿಶೀಲಿಸಿ ಸುಮೋಟೋ ಕೇಸ್ ನಲ್ಲಿ ಬಂಧಿಸುತ್ತೇವೆ. ಸುಮ್ಮನೆ ಸುಮ್ಮನೆ ಆರೆಸ್ಟ್ ಮಾಡಲ್ಲ. ದೊಡ್ಡವರ ಹೆಸರು ಇದ್ದಾಗ ನಿಧಾನವಾಗಿ ತನಿಖೆ ಮಾಡಿ ಬಂಧಿಸುತ್ತೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಬರೋಬ್ಬರಿ 10 ಕೋಟಿ ರೂ. ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

SCROLL FOR NEXT