ವಿಜಯಲಕ್ಷ್ಮಿ ದರ್ಶನ್ 
ರಾಜ್ಯ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌: ಟೆಕ್ಕಿ ಮತ್ತು ಆಟೋ ಡ್ರೈವರ್ ಬಂಧನ

ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು.

ಬೆಂಗಳೂರು: ನಟ ದರ್ಶನ್ ತೂಗುದೀಪ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು

ಡಿಸೆಂಬರ್ 24 ರಂದು ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮತ್ತು ಅವರ ಕುಟುಂಬದ ವಿರುದ್ಧ ಕೀಳು ಮಟ್ಟದ ಅಶ್ಲೀಲ, ಅವಹೇಳನಕಾರಿ ಪೋಸ್ಟ್‌ಗಳು, ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ವಿಜಯಲಕ್ಷ್ಮಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ, ಆರೋಪಿಗಳು ವಿಜಯಲಕ್ಷ್ಮಿ ಮತ್ತು ಅವರ ಕುಟುಂಬದ ವಿರುದ್ಧ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿರುವುದು ತಿಳಿದು ಬಂದಿದೆ. ತನಿಖೆ ಮುಂದುವರಿದಿದ್ದು ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ" ಎಂದು ನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

SCROLL FOR NEXT