ನಾರಾ ಭರತ್ ರೆಡ್ಡಿ  
ರಾಜ್ಯ

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಆರಂಭವಾದ ಗಲಾಟೆ ಗಾಳಿಯಲ್ಲಿ ಗುಂಡು ಹಾರಿಸಿ ಅದು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಇದೀಗ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್​​​ಐಆರ್​​ ದಾಖಲು ಮಾಡಲಾಗಿದೆ.

ನಿನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ನೀಡಿದ್ದರು. ಮತ್ತೊಂದೆಡೆ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ನೀಡಿದರು. ದೂರು ನೀಡುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಇದ್ದರು. ಎಎಸ್​​​ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು, ಎಫ್​​​ಐಆರ್​​ ದಾಖಲು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!