ರಂಜಿತಾ-ರಫೀಕ್ 
ರಾಜ್ಯ

ಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!

ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

ಕಾರವಾರ: ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತಳನ್ನು ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಎಂದು ಗುರುತಿಸಲಾಗಿದೆ. ಹತ್ತು ವರ್ಷಗಳ ಹಿಂದೆ ರಂಜಿತಾ ವಿಚ್ಛೇದನ ಪಡೆದು ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ಮಗುವಿನೊಂದಿಗೆ ವಾಸವಾಗಿದ್ದಳು. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾಳಿಗೆ ರಫೀಕ್ ನ ಪರಿಚಯವಾಗಿತ್ತು.

ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಒಳ್ಳೆಯ ಬಾಂಧವ್ಯ ಇತ್ತು. ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಹೋಗುತ್ತಿದ್ದನು. ಈ ಮಧ್ಯೆ ರಫೀಕ್ ಮದುವೆಯಾಗುವಂತೆ ರಂಜಿತಾಳನ್ನು ಒತ್ತಾಯಿಸುತ್ತಿದ್ದನು. ಅದಕ್ಕೆ ರಂಜಿತಾ ವಿರೋಧ ವ್ಯಕ್ತಪಡಿಸಿದ್ದಳು. ನಾನು ಈಗಾಗಲೇ ಮದುವೆಯಾಗಿ ಸಾಕಷ್ಟು ಅನುಭವಿಸಿದ್ದೇನೆ. ಮತ್ತೆ ಮದುವೆಯಾಗುವ ಇಷ್ಟವಿಲ್ಲ. ನಮ್ಮ ಸಂಬಂಧ ಹೀಗೆ ಇರಲಿ, ಮದುವೆ ಮಾತ್ರ ಬೇಡ ಎಂದು ಎಂದು ಹೇಳಿದ್ದಳು.

ರಂಜಿತಾಳ ಮಾತಿನಿಂದ ಕೋಪಗೊಂಡಿದ್ದ ರಫೀಕ್ ಎಂದು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ರಂಜಿತಾಳನ್ನು ಅಡ್ಡಗಟ್ಟಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ರಂಜಿತಾ ಕೋಪದಿಂದ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ರಫೀಕ್ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಪ್ರಕರಣ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ರಫೀಕ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಡ್ಡಾಯ; ವಾಟ್ಸಾಪ್ ಮೂಲಕ ಪೋಷಕರಿಗೆ ಎಚ್ಚರಿಕೆ!

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

SCROLL FOR NEXT