ಗ್ರೇಟರ್ ಬೆಂಗಳೂರು ಪ್ರಾಧಿಕಾರ  
ರಾಜ್ಯ

ಕೋಗಿಲು ನಿರಾಶ್ರಿತರಿಗೆ ಒಂಟಿ ಮನೆ ಯೋಜನೆಯಡಿ ಹಣಕಾಸು ನೆರವು: ಗ್ರೇಟರ್ ಬೆಂಗಳೂರು ಪ್ರಾಧಿಕಾರ

ಜಿಬಿಎ ಮತ್ತು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಆರ್‌ಜಿಹೆಚ್‌ಸಿಎಲ್) ಎರಡೂ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿವೆ.

ಬೆಂಗಳೂರು: ಕೋಗಿಲು ನಿರಾಶ್ರಿತರಿಗೆ ಒಂಟಿ ಮನೆ ಯೋಜನೆಯಡಿಯಲ್ಲಿ ಅಗತ್ಯ ಹಣಕಾಸಿನ ನೆರವು ನೀಡಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲು ಪ್ರದೇಶದಲ್ಲಿ ನೆಲಸಮಗೊಳಿಸಿರುವ ಮನೆಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಂಪೂರ್ಣ ಪರಿಶೀಲನೆ ನಡೆಸುತ್ತಿದೆ. ಉಪ ಆಯುಕ್ತರು ವರದಿ ಸಲ್ಲಿಸಿದ ನಂತರ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು.

ಜಿಬಿಎ ಮತ್ತು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಆರ್‌ಜಿಹೆಚ್‌ಸಿಎಲ್) ಎರಡೂ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿವೆ. ಹೆಸರುಗಳನ್ನು ಅಂತಿಮಗೊಳಿಸಲು ಮತ್ತು ತೆರವುಗೊಳಿಸಲು ಆಶ್ರಯ ಸಮಿತಿಯಿಂದ ಪರಿಶೀಲನೆ ಬಾಕಿ ಇದೆ. ಮನೆ ಹಂಚಿಕೆಯ ನಿರ್ಧಾರವು ಆಶ್ರಯ ಸಮಿತಿಯಿಂದ ಬಂದಿದೆ ಎಂದು ತಿಳಿಸಿದರು.

ಇದೇ ವೇಳೆ ಜಿಬಿಎ ಅಡಿಯಲ್ಲಿನ ಹೆರಿಗೆ ಆಸ್ಪತ್ರೆಗಳ ಕಳಪೆ ಸ್ಥಿತಿಯ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 350 ಕೋಟಿ ರೂ. ಅನುದಾನದ ಅಡಿಯಲ್ಲಿ 10 ಆಸ್ಪತ್ರೆಗಳನ್ನು 50 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಹೇಳಿದರು.

ಒಂದು ವೇಳೆ ಹೆರಿಗೆ ಕೇಂದ್ರ ಮುಚ್ಚಲ್ಪಟ್ಟಿದ್ದರೆ, ಅದರರ್ಥ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರ್ಥ. ಈ ಸಂದರ್ಭದಲ್ಲಿ ರೋಗಿಗಳಿಗೆ ಇತರೆ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತದೆ. ಆಸ್ಪತ್ರೆ ಮೇಲ್ದರ್ಜೆಗೇರಿಸಿದ ನಂತರ ನರ್ಸಿಂಗ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಮತ್ತು ಪೂರ್ಣ ಪ್ರಮಾಣದ ಸೇವೆಗಳನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ರಸ್ತೆಗಳ ಅಭಿವೃದ್ಧಿಯ ಕುರಿತು ಪ್ರಶ್ನೆಗೆ ಉತ್ತರಿಸಿ, ನಗರದ ಐದು ಪಾಲಿಕೆಗಳಾದ್ಯಂತ ಪ್ರಮುಖ ರಸ್ತೆಗಳನ್ನು 2026 ರಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಈ ವರ್ಷ ಪ್ರತಿ ಪ್ರತೀ ಪಾಲಿಕೆಗಳಲ್ಲಿ ಹತ್ತು ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ನಿರ್ವಹಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ