ಮಾಜಿ ಸೈನಿಕ ಪಿವಿ ಸುರೇಶ್ 
ರಾಜ್ಯ

ಬೆಂಗಳೂರು: ಕನ್ನಡಕ್ಕೆ ಅಪಮಾನ, ಹಾಸ್ಟೆಲ್ ವಾರ್ಡನ್ ಬಂಧನ, ಅಮಾನತು!

ಹಾಸ್ಟೆಲ್ ಆವರಣದಲ್ಲಿನ ನೈರ್ಮಲ್ಯದ ಬಗ್ಗೆ ದೂರು ನೀಡಲು ಹಾಸ್ಟೆಲ್ ವಿದ್ಯಾರ್ಥಿಗಳ ಗುಂಪು ಸುರೇಶ್ ಅವರನ್ನು ಸಂಪರ್ಕಿಸಿದಾಗ ಈ ಘಟನೆ ನಡೆದಿತ್ತು.

ಬೆಂಗಳೂರು: ನಗರದ AMC ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ 54 ವರ್ಷದ ಮಾಜಿ ಸೈನಿಕ ಪಿವಿ ಸುರೇಶ್ ಎಂಬುವರನ್ನು ಬನ್ನೇರುಘಟ್ಟ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಅಲ್ಲದೇ ಕೂಡಲೇ ಜಾರಿಗೆ ಬರುವಂತೆ ಅವರನ್ನು ಹಾಸ್ಟೆಲ್ ವಾರ್ಡನ್ ಸ್ಥಾನದಿಂದ ಕಾಲೇಜು ಆಡಳಿತ ಮಂಡಳಿ ವಜಾಗೊಳಿಸಿದೆ. ಹಾಸ್ಟೆಲ್ ಆವರಣದಲ್ಲಿನ ನೈರ್ಮಲ್ಯದ ಬಗ್ಗೆ ದೂರು ನೀಡಲು ಹಾಸ್ಟೆಲ್ ವಿದ್ಯಾರ್ಥಿಗಳ ಗುಂಪು ಸುರೇಶ್ ಅವರನ್ನು ಸಂಪರ್ಕಿಸಿದಾಗ ಈ ಘಟನೆ ನಡೆದಿತ್ತು.

ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದ್ದರಿಂದ ಕೋಪಗೊಂಡ ಕೇರಳ ಮೂಲದ ಸುರೇಶ್ ಕ್ಯಾಂಪಸ್‌ನಲ್ಲಿ ಭಾಷೆಯನ್ನು ಬಳಸಬಾರದು. ಮನೆಯಲ್ಲಿ ಕನ್ನಡ ಮಾತನಾಡಬೇಕು. ಹಿಂದಿ ಮಾತನಾಡಬೇಕೇ ಅಥವಾ ಕನ್ನಡ ಮಾತನಾಡಬೇಕೆ ಎಂಬುದನ್ನು ನಾನು ನಿರ್ಧರಿಸುತ್ತೇನೆ ಎಂದು ಹೇಳಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಸ್ಥಳೀಯ ಅಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯನ್ನು ಕೆರಳಿಸಿತ್ತು. ಸಂಸ್ಥೆಯ ಹಿತಾದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಸೋಮವಾರ ಮಧ್ಯಾಹ್ನ ಸುರೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಬನ್ನೇರುಘಟ್ಟ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಸುರೇಶ್ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಜಾಹೀರಾತು!

I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪ

ರಾಜಸ್ಥಾನ: ಎಸ್‌ಐ ಸೇರಿ ಮೂವರು ಪೊಲೀಸರಿಂದ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ; ಕೇಸ್ ದಾಖಲು

ಅತ್ಯಪರೂಪ, 135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜನವರಿಯಲ್ಲೇ 3 ದಿನ ಭಾರಿ ಮಳೆ

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...

SCROLL FOR NEXT