ರಾಜ್ಯ

Kogilu Demolition Row: ಸ್ಥಳೀಯರಿಂದ ಪ್ರತಿಭಟನೆ; ಬಾಂಗ್ಲಾದೇಶಿಗಳೆಂದು ಬಿಂಬಿಸುತ್ತಿರುವುದಕ್ಕೆ BJP ವಿರುದ್ಧ ಕಿಡಿ

ಬಿಜೆಪಿ ನಾಯಕರು ಬಡ ಕುಟುಂಬಗಳನ್ನು ಬಾಂಗ್ಲಾದೇಶದ ಅಕ್ರಮ ಪ್ರವಾಸಿಗರೆಂದು ಚಿತ್ರಿಸಿ, ಕಾಂಗ್ರೆಸ್ ಸರ್ಕಾರದ ಪುನರ್ವಸತಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಫಕೀರ ಕಾಲೋನಿಯ ನಿವಾಸಿಗಳ ಪುನರ್ವಸತಿ ಕುರಿತು ಅನಿಶ್ಚಿತತೆ ಹೆಚ್ಚಾಗುತ್ತಿದ್ದು, ಈ ನಡುವೆ ವಿವಿಧ ಸಂಘಟನೆಗಳು ಮತ್ತು ಸ್ಥಳೀಯ ನಿವಾಸಿಗಳು ಭಾನುವಾರ ಸಭೆ ನಡೆಸಿ, ಮಾನವ ಹಕ್ಕುಗಳ ಆಯೋಗದ ಆದೇಶದಂತೆ ಸೌಲಭ್ಯಗಳ ಒದಗಿಸುವಂತೆ ಆಗ್ರಹಿಸಿದರು.

ಸ್ಥಳಾಂತರಿಸಲ್ಪಟ್ಟವರಿಗೆ ಪರ್ಯಾಯ ವಸತಿ ಒದಗಿಸಬೇಕು ಅಥವಾ ತಾತ್ಕಾಲಿಕ ಆಶ್ರಯಗಳನ್ನು ನಿರ್ಮಿಸಲು ಅವರಿಗೆ ಅನುಮತಿ ನೀಡಬೇಕು. ಮಾನವ ಹಕ್ಕುಗಳ ಆಯೋಗದ ಆದೇಶದ ಪ್ರಕಾರ ಆಹಾರ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಕೋಗಿಲು ಕೊಳಚೆ ನಿವಾಸಿಗಳ ಹೋರಾಟ ಸಮಿತಿಯ ಬ್ಯಾನರ್ ಅಡಿಯಲ್ಲಿ ಸಭೆಯನ್ನು ನಡೆಯಲಾಗಿದ್ದು, ಸಭೆಯಲ್ಲಿ ದಲಿತ ಸಂಘಟನೆಗಳು, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ದುಡಿಯುವ ಜನರ ವೇದಿಕೆ, ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟ, ಸಿಪಿಐ ಮತ್ತು ಸಿಪಿಎಂ ಸೇರಿದಂತೆ ಎಡಪಕ್ಷಗಳು, ಇಸ್ಲಾಮಿಕ್ ವಿದ್ಯಾರ್ಥಿ ಗುಂಪುಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಬಿಜೆಪಿ ನಾಯಕರು ಬಡ ಕುಟುಂಬಗಳನ್ನು ಬಾಂಗ್ಲಾದೇಶದ ಅಕ್ರಮ ಪ್ರವಾಸಿಗರೆಂದು ಚಿತ್ರಿಸಿ, ಕಾಂಗ್ರೆಸ್ ಸರ್ಕಾರದ ಪುನರ್ವಸತಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಸ್ತುತ ನಿರಾಶ್ರಿತರಾಗಿರುವವರು ಸ್ಥಳದಲ್ಲಿ ಹಲವು ವರ್ಷಗಳಿಂದ ವಾಸವಿದ್ದರು. ಅತಿಕ್ರಮಣ ತೆರವುಗೊಳಿಸುವವರೆಗೂ ಅವರು ನಿರಾಶ್ರಿತರಾಗಿರಲಿಲ್ಲ ದುಡಿಯುವ ಜನರ ವೇದಿಕೆಯ ಪ್ರತಿನಿಧಿ ನಂದಿನಿಯವರು ಹೇಳಿದ್ದಾರೆ.

ಇತರ ಅರ್ಹ ಫಲಾನುಭವಿಗಳಿಗೆ ವಸತಿ ಒದಗಿಸುವುದನ್ನು ನಾವು ವಿರೋಧಿಸುವುದಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಅವರು ಭರವಸೆ ನೀಡಿದಂತೆ ಕೋಗಿಲು ನಿವಾಸಿಗಳಿಗೆ ತಕ್ಷಣವೇ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಬೇಸಿಗೆ ಸಮೀಪಿಸುತ್ತಿರುವುದರಿಂದ ಮತ್ತು ಎರಡು ವಾರಗಳಿಗೂ ಹೆಚ್ಚು ಕಾಲ ವಸತಿ ಇಲ್ಲದೆ ಕುಟುಂಬಗಳು ಬೀದಿಯಲ್ಲಿ ಕಳೆಯುತ್ತಿರುವುದರಿಂದ, ಪುನರ್ವಸತಿಯನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಪರ್ಯಾಯ ವ್ಯವಸ್ಥೆಗಳನ್ನು ಒದಗಿಸುವಂತೆ ಎರಡು ದಿನಗಳ ಕಾಲ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಅವರು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ