ಎ.ಪಿ. ಸಿಂಗ್ 
ರಾಜ್ಯ

ಸನ್ನದ್ಧತೆ ಕಾಪಾಡಿಕೊಳ್ಳಲು ಏರ್ ಕ್ರ್ಯಾಫ್ಟ್ ಅಗತ್ಯಗಳ ಸಕಾಲಿಕ ಪೂರೈಕೆ ನಿರ್ಣಾಯಕ: ಎ.ಪಿ ಸಿಂಗ್

ವೇಗವಾಗಿ ಬದಲಾಗುತ್ತಿರುವ ಭದ್ರತಾ ವ್ಯವಸ್ಥೆಯಲ್ಲಿ ಭಾರತೀಯ ವಾಯಪಡೆಯನ್ನು ಸನ್ನದ್ಧವಾಗಿರಿಸಲು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಅಗತ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು.

ಬೆಂಗಳೂರು: ವಾಯುಪಡೆ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಪಾಡಿಕೊಳ್ಳಲು ಅಗತ್ಯಗಳನ್ನು ಸಕಾಲಿಕ ಪೂರೈಕೆ ಮಾಡುವುದು ನಿರ್ಣಾಯಕ ಎಂದು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಏರ್‌ಬೋರ್ನ್ ಸಿಸ್ಟಮ್ಸ್ ಕೇಂದ್ರದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ 'ಏರೋನಾಟಿಕ್ಸ್ 2047' ಉದ್ಘಾಟನಾ ಸಮಾರಂಭದಲ್ಲಿ ಎಪಿ ಸಿಂಗ್ ಅವರು ಮಾತನಾಡಿದರು.

ವೇಗವಾಗಿ ಬದಲಾಗುತ್ತಿರುವ ಭದ್ರತಾ ವ್ಯವಸ್ಥೆಯಲ್ಲಿ ಭಾರತೀಯ ವಾಯಪಡೆಯನ್ನು ಸನ್ನದ್ಧವಾಗಿರಿಸಲು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಅಗತ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು ಎಂದು ಹೇಳಿದರು.

ಇದೇ ವೇಳೆ ತೇಜಸ್‌ ಲಘು ಯುದ್ಧವಿಮಾನ ಹಾರಾಟ ಆರಂಭಿಸಿ 25 ವರ್ಷ ಪೂರ್ಣಗೊಳಿಸಿರುವುದಕ್ಕೆ ಎಡಿಎ ಅನ್ನು ಅಭಿನಂದಿಸಿದರು. ಸೇನಾ ಸಲಕರಣೆಗಳ ಸಕಾಲಿಕ ಪೂರೈಕೆಯ ಅಗತ್ಯದ ಬಗ್ಗೆ ಒತ್ತಿ ಹೇಳಿದರು.

2047ರ ವೇಳೆಗೆ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಲು ಮತ್ತು ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ದೇಶಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಮುಖ್ಯಸ್ಥ ಸಮಿರ್ ವಿ. ಕಾಮತ್‌ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

SCROLL FOR NEXT