ಕಂದಾಯ ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ರಾಜ್ಯಾದ್ಯಂತ 62 ಕೋಟಿ ಪುಟಗಳಷ್ಟು ಭೂ ಕಂದಾಯ ದಾಖಲೆ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯಾದ್ಯಂತ 62 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಮೂರು ತಿಂಗಳಲ್ಲಿ ಎಲ್ಲಾ 100 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.

ಬೆಂಗಳೂರು: ರಾಜ್ಯಾದ್ಯಂತ 62 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಮೂರು ತಿಂಗಳಲ್ಲಿ ಎಲ್ಲಾ 100 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು ಉತ್ತರ ಹಾಗೂ ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಭೂಸುರಕ್ಷಾ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವರು ಮಾತನಾಡಿದರು.

ರಾಜ್ಯಾದ್ಯಂತ 62 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಮೂರು ತಿಂಗಳಲ್ಲಿ ಎಲ್ಲಾ 100 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಈ ಪ್ರಕ್ರಿಯೆಯನ್ನು 150 ಕೋಟಿ ರೂ. ಬಜೆಟ್‌ನಲ್ಲಿ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ 100 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.

ನಕಲಿ ದಾಖಲೆಗಳ ಸೃಷ್ಟಿ ಪ್ರಕರಣಗಳನ್ನು ಕಂದಾಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರತಿಯೊಂದು ಅನುಮಾನಾಸ್ಪದ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಮತ್ತು ಅಗತ್ಯವಿದ್ದರೆ, ದಾಖಲೆಗಳ ಸತ್ಯಾಸತ್ಯತೆಯ ಕುರಿತು ವರದಿಯನ್ನು ಪಡೆಯಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲೂಕು ಕಚೇರಿಯಲ್ಲಿ ದಾಖಲೆಗಳ ಡಿಜಿಟಲೀಕರಣವನ್ನು ಮಾಡಲಾಗುತ್ತಿದ್ದು, ಜನವರಿ 5, 2026 ರಿಂದ ರಾಜ್ಯಾದ್ಯಂತ ಸಹಾಯಕ ಆಯುಕ್ತರು ಮತ್ತು ಉಪ ಆಯುಕ್ತರ ಕಚೇರಿಗಳಲ್ಲಿ ಈ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಹೇಳಿದರು.

ಈ ಅಭಿಯಾನವನ್ನು ಜನವರಿ 2025 ರಲ್ಲಿ ಪ್ರಾರಂಭಿಸಲಾಗಿದ್ದು, 240 ತಾಲ್ಲೂಕುಗಳಲ್ಲಿ 70 ರಲ್ಲಿ ಗಣಕೀಕರಣ ಪೂರ್ಣಗೊಂಡಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಇಲಾಖೆಯು ಅಂಚೆಚೀಟಿಗಳು,ನೋಂದಣಿ ಇಲಾಖೆ ಮತ್ತು ಕಂದಾಯ ಇಲಾಖೆಯ ಸರ್ವೆ ಮತ್ತು ಸೆಟಲ್ ಮೆಂಟ್ ವಿಭಾಗದಲ್ಲಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ.

ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ಸ್ವರೂಪದಲ್ಲಿ ದಾಖಲೆಗಳನ್ನು ರಕ್ಷಿಸುವುದರಿಂದ ಭವಿಷ್ಯದಲ್ಲಿ ನಕಲಿ ದಾಖಲೆಗಳ ಸೃಷ್ಟಿಯನ್ನು ತಡೆಯಬಹುದು. ಎಲ್ಲಾ ಸ್ಕ್ಯಾನ್ ಮಾಡಿದ ದಾಖಲೆಗಳು ಈಗಾಗಲೇ ಆನ್‌ಲೈನ್‌ನಲ್ಲಿ ಲಭ್ಯವಿದೆ ಮತ್ತು 36,36,596 ಪುಟಗಳನ್ನು ಸಾರ್ವಜನಿಕರು ಆನ್‌ಲೈನ್‌ನಲ್ಲಿ ಪಡೆದಿದ್ದಾರೆಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

RCB ಅಭಿಮಾನಿಗಳಿಗೆ ತೀವ್ರ ನಿರಾಸೆ: ಚಿನ್ನಸ್ವಾಮಿಗಿಲ್ಲ IPL ಭಾಗ್ಯ?, ಹೊಸ ತವರು ಮೈದಾನ ಬಹುತೇಕ ಫಿಕ್ಸ್!

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಪರ್ಧೆ!

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್

SCROLL FOR NEXT