ಬಸವಂತ ಕಡೋಲ್ಕರ್ 
ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಜೀವ ಉಳಿಸಿದ IPS ಅಧಿಕಾರಿ

ಇಂದು ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಮಂಗಳವಾರ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಮೃಣಾಲ್ ಅವರು ಆಸ್ಪತ್ರೆಗೆ ಭೇಟಿ, ಬಸವಂತ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು, ಹಲ್ಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಚಾಕು ಇರಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಹಲ್ಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಜೀವ ಉಳಿಸಿದ IPS ಅಧಿಕಾರಿ

ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಅವರು ಬಸವಂತ ಕಡೋಲ್ಕರ್​​ ಜೀವ ಉಳಿಸಿದ್ದಾರೆ. ಘಟನೆ ವೇಳೆ ರವೀಂದ್ರ ಗಡಾದಿ ಅವರು ಮನೆಗೆ ಊಟಕ್ಕೆ ಹೋಗುತ್ತಿದ್ದರು. ಗಲಾಟೆ ನೋಡುತ್ತಿದ್ದಂತೆ ಸ್ಥಳಕ್ಕೆ ಹೋಗಿ ದುಷ್ಕರ್ಮಿಗಳಿಂದ ಬಸವಂತ ಅವರ ಜೀವ ಉಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ